ದಲಿತರ ಭೂಮಿ ಲೂಟಿ ಮಾಡಿದವರಿಂದ ನಾನೇನೂ ಕಲಿಯಬೇಕಿಲ್ಲ: ಹೆಚ್ ಡಿ ಕುಮಾರಸ್ವಾಮಿ

ತಾನ್ಯಾವತ್ತೂ ಅಧಿಕಾರಕ್ಕಾಗಿ ಆಸೆ ಪಟ್ಟಿದಿಲ್ಲ, ಅಧಿಕಾರ ಅನ್ನೋದು ತನ್ನ ಮನೆ ಆಸ್ತಿ ಅಲ್ಲ, ಅದನ್ನು ಜನ ನೀಡುತ್ತಾರೆ, ಇನ್ನೂ 20 ವರ್ಷ ಅವರೇ ಗೂಟ ಹೊಡೆದುಕೊಂಡು ಆಧಿಕಾರ ನಡೆಸಲಿ, ಆದರೆ ಲೂಟಿ ಮಾಡೋದನ್ನು ನಿಲ್ಲಿಸಲಿ, ಜನರಿಗೆ ಮಕ್ಮಲ್ ಟೋಪಿ ಹಾಕೋದು ಬಿಡಲಿ ಎಂದು ಕುಮಾರಸ್ವಾಮಿ ಹೇಳಿದರು.

ದಲಿತರ ಭೂಮಿ ಲೂಟಿ ಮಾಡಿದವರಿಂದ ನಾನೇನೂ ಕಲಿಯಬೇಕಿಲ್ಲ: ಹೆಚ್ ಡಿ ಕುಮಾರಸ್ವಾಮಿ
|

Updated on: Nov 14, 2023 | 5:40 PM

ಬೆಂಗಳೂರು: ಕಾಂಗ್ರೆಸ್ ನಾಯಕರು ಮಾಡುತ್ತಿರುವ ವಿದ್ಯುತ್ ಕಳ್ಳತನದ ಅರೋಪಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದ ಸಹಕಾರ ಸಂಘವೊಂದಕ್ಕೆ (Cooperative society) ಸಂಬಂಧಿಸಿದ ಪ್ರಕರಣದಲ್ಲಿ ಜಯನಗರದ ಸುಳ್ಳು ಅಡ್ರೆಸ್ ನೀಡಿ ದಲಿತರ ಭೂಮಿಯನ್ನು ಕಬಳಿಸಿದ ಜನರಿಂದ ತಾನು ಬದುಕುವ ರೀತಿ ಕಲಿಯಬೇಕೆ? ಎಂದು ಕುಮಾರಸ್ವಾಮಿ ಹೇಳಿದರು. ತಮ್ಮನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ ಅವರು, ಕಾಂಗ್ರೆಸ್ (Congress) ಏನೇ ಪ್ರಯತ್ನ ಮಾಡಿದರೂ ತನ್ನ ಬಾಯಿ ಮುಚ್ಚಿಸುವುದು ಸಾಧ್ಯವಿಲ್ಲ, ತಾನ್ಯಾವತ್ತೂ ಅಧಿಕಾರಕ್ಕಾಗಿ ಆಸೆ ಪಟ್ಟಿದಿಲ್ಲ, ಅಧಿಕಾರ ಅನ್ನೋದು ತನ್ನ ಮನೆ ಆಸ್ತಿ ಅಲ್ಲ, ಅದನ್ನು ಜನ ನೀಡುತ್ತಾರೆ, ಇನ್ನೂ 20 ವರ್ಷ ಅವರೇ ಗೂಟ ಹೊಡೆದುಕೊಂಡು ಆಧಿಕಾರ ನಡೆಸಲಿ, ಆದರೆ ಲೂಟಿ ಮಾಡೋದನ್ನು ನಿಲ್ಲಿಸಲಿ, ಜನರಿಗೆ ಮಕ್ಮಲ್ ಟೋಪಿ ಹಾಕೋದು ಬಿಡಲಿ ಎಂದು ಕುಮಾರಸ್ವಾಮಿ ಹೇಳಿದರು. ತನ್ನ ಹೇಳಿಕೆಗಳಿಂದ ಸರ್ಕಾರಕ್ಕೆ ಹಲವಾರು ಬಾರಿ ಮುಜುಗುರ ಉಂಟಾಗುವ ಸ್ಥಿತಿ ಎದುರಾಗಿದೆ, ಹಾಗಾಗೇ ಬಾಯಿ ಮುಚ್ಚಿಸುವ ಪ್ರಯತ್ನ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್