ದಲಿತರ ಭೂಮಿ ಲೂಟಿ ಮಾಡಿದವರಿಂದ ನಾನೇನೂ ಕಲಿಯಬೇಕಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Nov 14, 2023 | 5:40 PM

ತಾನ್ಯಾವತ್ತೂ ಅಧಿಕಾರಕ್ಕಾಗಿ ಆಸೆ ಪಟ್ಟಿದಿಲ್ಲ, ಅಧಿಕಾರ ಅನ್ನೋದು ತನ್ನ ಮನೆ ಆಸ್ತಿ ಅಲ್ಲ, ಅದನ್ನು ಜನ ನೀಡುತ್ತಾರೆ, ಇನ್ನೂ 20 ವರ್ಷ ಅವರೇ ಗೂಟ ಹೊಡೆದುಕೊಂಡು ಆಧಿಕಾರ ನಡೆಸಲಿ, ಆದರೆ ಲೂಟಿ ಮಾಡೋದನ್ನು ನಿಲ್ಲಿಸಲಿ, ಜನರಿಗೆ ಮಕ್ಮಲ್ ಟೋಪಿ ಹಾಕೋದು ಬಿಡಲಿ ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ನಾಯಕರು ಮಾಡುತ್ತಿರುವ ವಿದ್ಯುತ್ ಕಳ್ಳತನದ ಅರೋಪಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದ ಸಹಕಾರ ಸಂಘವೊಂದಕ್ಕೆ (Cooperative society) ಸಂಬಂಧಿಸಿದ ಪ್ರಕರಣದಲ್ಲಿ ಜಯನಗರದ ಸುಳ್ಳು ಅಡ್ರೆಸ್ ನೀಡಿ ದಲಿತರ ಭೂಮಿಯನ್ನು ಕಬಳಿಸಿದ ಜನರಿಂದ ತಾನು ಬದುಕುವ ರೀತಿ ಕಲಿಯಬೇಕೆ? ಎಂದು ಕುಮಾರಸ್ವಾಮಿ ಹೇಳಿದರು. ತಮ್ಮನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ ಅವರು, ಕಾಂಗ್ರೆಸ್ (Congress) ಏನೇ ಪ್ರಯತ್ನ ಮಾಡಿದರೂ ತನ್ನ ಬಾಯಿ ಮುಚ್ಚಿಸುವುದು ಸಾಧ್ಯವಿಲ್ಲ, ತಾನ್ಯಾವತ್ತೂ ಅಧಿಕಾರಕ್ಕಾಗಿ ಆಸೆ ಪಟ್ಟಿದಿಲ್ಲ, ಅಧಿಕಾರ ಅನ್ನೋದು ತನ್ನ ಮನೆ ಆಸ್ತಿ ಅಲ್ಲ, ಅದನ್ನು ಜನ ನೀಡುತ್ತಾರೆ, ಇನ್ನೂ 20 ವರ್ಷ ಅವರೇ ಗೂಟ ಹೊಡೆದುಕೊಂಡು ಆಧಿಕಾರ ನಡೆಸಲಿ, ಆದರೆ ಲೂಟಿ ಮಾಡೋದನ್ನು ನಿಲ್ಲಿಸಲಿ, ಜನರಿಗೆ ಮಕ್ಮಲ್ ಟೋಪಿ ಹಾಕೋದು ಬಿಡಲಿ ಎಂದು ಕುಮಾರಸ್ವಾಮಿ ಹೇಳಿದರು. ತನ್ನ ಹೇಳಿಕೆಗಳಿಂದ ಸರ್ಕಾರಕ್ಕೆ ಹಲವಾರು ಬಾರಿ ಮುಜುಗುರ ಉಂಟಾಗುವ ಸ್ಥಿತಿ ಎದುರಾಗಿದೆ, ಹಾಗಾಗೇ ಬಾಯಿ ಮುಚ್ಚಿಸುವ ಪ್ರಯತ್ನ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.