AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya: ಕುಮಾರಸ್ವಾಮಿಯವರಿಗೆ ನನ್ನ ಮೇಲೆ ಪ್ರೀತಿಯೋ, ದ್ವೇಷವೋ ಗೊತ್ತಾಗುತ್ತಿಲ್ಲ: ಎನ್ ಚಲುವರಾಯಸ್ವಾಮಿ, ಸಚಿವ

Mandya: ಕುಮಾರಸ್ವಾಮಿಯವರಿಗೆ ನನ್ನ ಮೇಲೆ ಪ್ರೀತಿಯೋ, ದ್ವೇಷವೋ ಗೊತ್ತಾಗುತ್ತಿಲ್ಲ: ಎನ್ ಚಲುವರಾಯಸ್ವಾಮಿ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 15, 2023 | 2:49 PM

Share

2018-19 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಪತ್ರಿಕೆಯೊಂದು ವರ್ಗಾವಣೆ ದಂಧೆ ಆರೋಪಿಸಿ ರೇಟ್ ಕಾರ್ಡ್ ಪ್ರಕಟಿಸಿದ್ದನ್ನು ಚೆಲುವರಾಯಸ್ವಾಮಿ ಹೇಳಿದ್ದರು.

ಮಂಡ್ಯ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಮತ್ತು ಶಾಸಕ ಹೆಚ್ ಡಿ ಕುಮಾರಸ್ವಾಮಿ (Kumaraswamy) ಹಿಂದೆ ಒಂದೇ ದೋಣಿಯ ಪಯಣಿಕರಾಗಿದ್ದರು ಆದರೆ ಈಗ ದೋಣಿಗಳು ಬೇರೆಯಾಗಿವೆ. ಹಾಗಾಗಿ ಅವರ ನಡುವೆ ಸದನದೊಳಗೆ ಮತ್ತು ಹೊರಗೆ ಅರೋಪ-ಪ್ರತ್ಯಾರೋಪಗಳು ನಡೆಯುತ್ತಿರುತ್ತವೆ. ಮೊನ್ನೆ ಸದನದಲ್ಲಿ ಕುಮಾರಸ್ವಾಮಿ ಸರ್ಕಾರ ವರ್ಗಾವಣೆ ಧಂದೆ (transfer deals) ನಡೆಸುತ್ತಿದೆ ಅಂತ ಆರೋಪಿಸಿ ಒಂದು ರೇಟ್ ಕಾರ್ಡ್ ಅನ್ನು ಪ್ರದರ್ಶಿಸಿದ್ದರು. ಅದಕ್ಕೆ ಪ್ರತಿಯಾಗಿ 2018-19 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಪತ್ರಿಕೆಯೊಂದು ವರ್ಗಾವಣೆ ದಂಧೆ ಆರೋಪಿಸಿ ರೇಟ್ ಕಾರ್ಡ್ ಪ್ರಕಟಿಸಿದ್ದನ್ನು ಚೆಲುವರಾಯಸ್ವಾಮಿ ಹೇಳಿದ್ದರು. ಕುಮಾರಸ್ವಾಮಿ ಅವರಿಗ್ಯಾಕೆ ಕೃಷಿ ಇಲಾಖೆ ಮತ್ತು ಅದರ ಸಚಿವರ ಹೆಚ್ಚು ಗಮನ ಅಂತ ಮಾಧ್ಯಮದವರು ಕೇಳಿದಾಗ, ಅದು ಅವರ ಪ್ರೀತಿಯೋ ಅಥವಾ ಹಗೆಯೋ ಗೊತ್ತಾಗುತ್ತಿಲ್ಲ, ಪ್ರೀತಿಯಾದರೂ ಸರಿ ದ್ವೇಷವಾದರೂ ಸರಿ ಎಂದು ಚಲುವರಾಯಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.