Video: ಕರೆಂಟ್ ಬಿಲ್​ ಕಟ್ಟಬಾರದಂತೆ: ಹಳ್ಳಿ ಹಳ್ಳಿಗಳಲ್ಲಿ ತಮಟೆ ಬಾರಿಸುತ್ತಾ ಕೂಗಿ ಹೇಳುತ್ತಿರುವ ವ್ಯಕ್ತಿ

Updated on: May 27, 2023 | 8:47 PM

ಕಾಂಗ್ರೆಸ್​​ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ತಮಟೆ ಬಾರಿಸುತ್ತಾ ಕೂಗಿ ಹೇಳುತ್ತಿರುವ ವ್ಯಕ್ತಿ ವಿಡಿಯೋ ಈದೀಗ ವೈರಲ್ ಆಗಿದೆ.​

ದಾವಣಗೆರೆ: ವಿದ್ಯುತ್ ಶುಲ್ಕ (electricity bill) ಪಾವತಿಸದಂತೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಆದೇಶಿಸಿದ್ದಾರೆ. ಹಾಗಾಗಿ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ತಮಟೆ ಬಾರಿಸುವ ಮೂಲಕ ವ್ಯಕ್ತಿ ಓರ್ವ ಜನರಲ್ಲಿ ಜಾಗೃತಿ ಮಾಡಿಸಿದ್ದಾರೆ. ದಾವಣಗೆರೆ ತಾಲೂಕಿ ಗೋಣಿವಾಡ ಗ್ರಾಮದಲ್ಲಿ ಈ ಘಟನೆ ಕಂಡು ಬಂದಿದ್ದು, ಹಳ್ಳಿ ಹಳ್ಳಿಗಳಲ್ಲಿ ತಮಟೆ ಬಾರಿಸುತ್ತಾ ಕರೆಂಟ್ ಬಿಲ್ ಕಟ್ಟಬೇಡಿ ಎನ್ನುತ್ತಿದ್ದಾರೆ. ಕಾಂಗ್ರೆಸ್​​ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ತಮಟೆ ಬಾರಿಸುತ್ತಾ ಕೂಗಿ ಹೇಳುತ್ತಿರುವ ವ್ಯಕ್ತಿ ವಿಡಿಯೋ ಈದೀಗ ವೈರಲ್ ಆಗಿದೆ.​

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More