ನಿಮ್ಮನ್ನು ವಿಪಕ್ಷ ನಾಯಕ ಮಾಡ್ತಾರೆ ಅಂತಾ ಅಂದುಕೊಂಡಿದ್ದೀರಾ? ಬಸನಗೌಡ ಪಾಟೀಲ್ ಯತ್ನಾಳ್​ಗೆ ಕಲಾಪದಲ್ಲೇ ಟಗರು ಸಿದ್ದಣ್ಣ ಸಖತ್ ಗುದ್ದು 

Updated on: Jul 05, 2023 | 4:08 PM

ಹಿಂದೂ ಹುಲಿ ಬಸನಗೌಡ ಪಾಟೀಲ್​​ ಯತ್ನಾಳ್​ಗೆ ವಿಧಾನ ಸಭೆ ಕಲಾಪದಲ್ಲೇ ಟಗರು ಸಿದ್ದಣ್ಣ ಸಖತ್ ಗುದ್ದು

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ನಿಲುವಳಿ ಪ್ರಸ್ತಾವ ಮಂಡನೆ ಸಂದರ್ಭದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಕಿಡಿಕಾರಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯತ್ನಾಳ್ ಅವರೇ ನೀವು ಸ್ವಲ್ಪ ತಾಳ್ಮೆಯಿಂದಿರಿ ಎಂದರು. ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ, ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡ್ತಾರೆ ಅಂತಾ ಅಂದುಕೊಂಡಿದ್ದೀರಾ? ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ ಎಂದು ಶಾಸಕ ಯತ್ನಾಳ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಚಾಯಿಸಿದರು.

Published on: Jul 05, 2023 03:01 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More