ರಾಜಕೀಯವಾಗಿ ಸೂಕ್ಷ್ಮ ಕಾಲಘಟ್ಟದಲ್ಲಿದ್ದೇವೆ, ಸ್ವಾಮೀಜಿಯವರ ಸಿಎಂ ಯೋಗ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಹೆಚ್ ಕೆ ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 03, 2025 | 6:35 PM

ಹೆಚ್ ಕೆ ಪಾಟೀಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನಾಯಕರಿಗೆ ಮಾಡಿರುವ ತಾಕೀತಿಗೆ ಅನುಗುಣವಾಗಿ ನಡೆಯುತ್ತಿದ್ದಾರೆ. ಬೇರೆ ಕೆಲವರಾದರೋ ಅವರು ಸಿಎಂ ಇವರು ಕೆಪಿಸಿಸಿ ಅಧ್ಯಕ್ಷ ಅಂತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಪಾಟೀಲ್ ಮಾತ್ರ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿಯ ಹಾಗೆ ಯಾವುದೇ ಹೇಳಿಕೆ ನೀಡದೆ ತಮ್ಮ ಕೆಲಸ ತಾವು ಮಾಡಿಕೊಂಡಿದ್ದಾರೆ

ಗದಗ: ಹಿರಿಯ ರಾಜಕಾರಣಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಚಿವರಾಗುವ ಹೆಚ್ ಕೆ ಪಾಟೀಲ್ ಅವರಿಗೂ ರಾಜ್ಯದ ಮುಖ್ಯಮಂತ್ರಿಯಾಗುವ ಆಸೆ ಇದೆಯೇ? ಭೋವಿ ಸಮಾಜದ ಸಿದ್ದರಾಮೇಶ್ವರ ಶ್ರೀಗಳು ಪಾಟೀಲ್ ಅವರಿಗೆ ಯೋಗ ಇದೆ ಎಂದು ಹೇಳಿರುವುದು ಇಂಥದೊಂದು ಪ್ರಶ್ನೆ ಹುಟ್ಟಲು ಕಾರಣವಾಗಿದೆ. ಗದಗನಲ್ಲಿ ಪ್ರತಿಕ್ರಿಯೆ ನೀಡಿದ ಪಾಟೀಲ್ ಅವರು ಸ್ವಾಮಿಗಳ ಇಚ್ಛೆ ಇರಬಹುದು, ಆದರೆ ರಾಜಕಾರಣದಲ್ಲಿ ತಮ್ಮ ನಿಲುವುಗಳ ಬಗ್ಗೆ ಈಗಾಗಲೇ ಹತ್ತಾರು ಬಾರಿ ಹೇಳಿಯಾಗಿದೆ, ರಾಜಕೀಯ ಈಗ ಸೂಕ್ಷ್ಮ ಕಾಲಘಟ್ಟದಲ್ಲಿರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದರು..

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಚಿವ ಹೆಚ್​ ಕೆ ಪಾಟೀಲ್​ ತವರು ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ: ಗದಗ-ಬೆಟಗೇರಿ ಜನರಿದ ಹಿಡಿಶಾಪ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.