ಧರ್ಮ-ಅಧರ್ಮಗಳ ವ್ಯಾಖ್ಯಾನ ಮಾಡಲಾರೆ, ಚುನಾವಣೆಯಲ್ಲಿ ಸ್ಪರ್ಧೆ ಆರೋಗ್ಯಕರವಾಗಿರಬೇಕು: ಡಾ ಸಿಎನ್ ಮಂಜುನಾಥ್

|

Updated on: Mar 23, 2024 | 4:38 PM

ಕಳೆದ 8-10 ದಿನಗಳಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇನೆ, ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದುಗೂಡಿ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ರಾಜರಾಜೇಶ್ವರಿ ನಗರ ಮತ್ತು ಕುಣಿಗಲ್ ಗಳಲ್ಲಿ ಜನರಿಂದ ಅಭೂತಪೂರ್ವ ಸ್ವಾಗತ ಸಿಕ್ಕಿದೆ, ಕಾರ್ಯಕರ್ತರು ಅತ್ಯಂತ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಡಾ ಮಂಜುನಾಥ್ ಹೇಳಿದರು.

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ (Dr CN Manjunath) ಚುನಾವಣಾ ಪ್ರಚಾರ ಕಾರ್ಯ (electioneering) ಉತ್ಸಾಹದಿಂದ ಮಾಡುತ್ತಿದ್ದಾರೆ ಮತ್ತು ಅವರೇ ಹೇಳುವಂತೆ ಕ್ಷೇತ್ರದೆಲ್ಲೆಡೆ ಉತ್ತಮ ಪ್ರತಿಕ್ರಿಯೆ (response) ಸಿಗುತ್ತಿದೆ. ಇಂದು ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕಳೆದ 8-10 ದಿನಗಳಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇನೆ, ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದುಗೂಡಿ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ರಾಜರಾಜೇಶ್ವರಿ ನಗರ ಮತ್ತು ಕುಣಿಗಲ್ ಗಳಲ್ಲಿ ಜನರಿಂದ ಅಭೂತಪೂರ್ವ ಸ್ವಾಗತ ಸಿಕ್ಕಿದೆ, ಕಾರ್ಯಕರ್ತರು ಅತ್ಯಂತ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಡಾ ಮಂಜುನಾಥ್ ಹೇಳಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮ ಮತ್ತು ಅಧರ್ಮಗಳ ನಡುವಿನ ಹೋರಾಟ ಎಂದು ಹೇಳಲಾಗುತ್ತಿದೆ ಅದಕ್ಕೆ ತಾವೇನು ಹೇಳ್ತೀರಿ ಅಂತ ಕೇಳಿದಾಗ ಡಾ ಮಂಜುನಾಥ್, ಧರ್ಮ ಅಧರ್ಮಗಳ ವ್ಯಾಖ್ಯಾನ ತಾನು ಮಾಡಲ್ಲ ಅದರೆ, ಚುನಾವಣೆಗಳಲ್ಲಿ ಆರೋಗ್ಯಕರ ಸ್ಪರ್ಧೆ ನಡೆಯಬೇಕು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೈತ್ರಿ ಅಸಮಾಧಾನ ಸರಿಪಡಿಸಲು ಬಿಜೆಪಿ ಹೈಕಮಾಂಡ್ ಕಸರತ್ತು: ಮೈಸೂರಿನಲ್ಲಿ ಮೋದಿ, ದೇವೇಗೌಡ ಬಹಿರಂಗ ಸಭೆಗೆ ಚಿಂತನೆ

Follow us on