ರಾಜ್ಯವನ್ನು ಒಂದು ಸುತ್ತು ಹಾಕಿದ ಬಳಿಕ ಕಾಂಗ್ರೆಸ್​ಗೆ ಎಷ್ಟು ಸ್ಥಾನ ಸಿಗಲಿವೆ ಅಂತ ಹೇಳ್ತೀನಿ: ಡಿಕೆ ಶಿವಕುಮಾರ್

ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರವ ಬಗ್ಗೆ ಶಿವಕುಮಾರ್, ಸ್ವಾಮೀಜಿ ಬಗ್ಗೆ ತಾನೇನೂ ಕಾಮೆಂಟ್ ಮಾಡಲ್ಲ, ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಗೆ ಬಿ ಫಾರಂ ನೀಡಲಾಗಿದೆ ಎಂದರು.

ರಾಜ್ಯವನ್ನು ಒಂದು ಸುತ್ತು ಹಾಕಿದ ಬಳಿಕ ಕಾಂಗ್ರೆಸ್​ಗೆ ಎಷ್ಟು ಸ್ಥಾನ ಸಿಗಲಿವೆ ಅಂತ ಹೇಳ್ತೀನಿ: ಡಿಕೆ ಶಿವಕುಮಾರ್
|

Updated on: Apr 12, 2024 | 3:06 PM

ಕಲಬುರಗಿ: ತೀಕ್ಷ್ನ ತಾಪಮಾನದಿಂದ ಕುದಿಯುತ್ತಿರುವ ಕಲಬುರಗಿಯಲ್ಲಿ ಆಯೋಜಿಸಲಾಗಿರುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಅಗಮಿಸಿದ ಡಿಕೆ ಶಿವಕುಮಾರ್ (DK Shivakumar) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸ್ಥಾನ ಸಿಗಲಿವೆ ಅನ್ನೋದನ್ನು ಇಡೀ ರಾಜ್ಯವನ್ನು ಒಂದು ಸುತ್ತು ಹಾಕಿದ ಬಳಿಕ ಹೇಳುತ್ತೇನೆ ಎಂದರು. ವಿಧಾನಸಭಾ ಚುನಾವಣೆಯಲ್ಲಿ (Assembly Polls) ಅವರು ಕಾಂಗ್ರೆಸ್ ಗೆ 141 ಸೀಟು ಬರುತ್ತವೆ ಎಂದಿದ್ದರು ಮತ್ತು ಅವರ ಭವಿಷ್ಯವಾಣಿ (prediction) ಆಲ್ಮೋಸ್ಟ್ ನಿಜವಾಗಿತ್ತು. ಬಿಜೆಪಿ ನಾಯಕರು ಎಲ್ಲ 28 ಸ್ಥಾನ ಗೆಲ್ಲುತ್ತೇವೆ ಅನ್ನುತ್ತಿದ್ದಾರಲ್ಲ ಸರ್ ಅಂತ ಕೇಳಿದಾಗ, ಅವರು ಲೋಕಸಭೆಯ ಎಲ್ಲ 543 ಸೀಟುಗಳನ್ನು ಗೆಲ್ಲುತ್ತೇವೆ ಅನ್ನುತ್ತಾರೆ, ಅಷ್ಟೆಲ್ಲ ವಿಶ್ವಾಸ ಇದ್ದವರು 14 ಕ್ಷೇತ್ರಗಳಲ್ಲಿ ಯಾಕೆ ಅಭ್ಯರ್ಥಿಗಳನ್ನು ಬದಲಾಯಿಸಿದ್ದಾರೆ? ಆ ಮುಖಗಳಿಗೆ ವೋಟು ಸಿಕ್ಕಲ್ಲ ಅಂತ ಪಕ್ಷದ ವರಿಷ್ಠರಿಗೆ ಚೆನ್ನಾಗಿ ಗೊತ್ತಿತ್ತು, ಹಾಗಾಗೇ ಬೇರೆಯರಿಗೆ ಟಿಕೆಟ್ ನೀಡಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರವ ಬಗ್ಗೆ ಶಿವಕುಮಾರ್, ಸ್ವಾಮೀಜಿ ಬಗ್ಗೆ ತಾನೇನೂ ಕಾಮೆಂಟ್ ಮಾಡಲ್ಲ, ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಗೆ ಬಿ ಫಾರಂ ನೀಡಲಾಗಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಾಂಗ್ರೆಸ್​​ ಸೇರಿದ ದೀಪಕ್​ ತಿಮ್ಮಯ್ಯ: ಕೆಪಿಸಿಸಿ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರಾಗಿ ನೇಮಿಸಿದ ಡಿಕೆ ಶಿವಕುಮಾರ್

Follow us
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!