AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dorai Bhagavan: ‘ಡಾ. ರಾಜ್​​ ಕುಟುಂಬಕ್ಕೆ ಬಲಗೈ ಬಂಟ ಆಗಿದ್ದರು’: ಎಸ್​.ಕೆ. ಭಗವಾನ್​​ ಕುರಿತ ನೆನಪು ತೆರೆದಿಟ್ಟ ಚಿನ್ನೇಗೌಡ

Dorai Bhagavan: ‘ಡಾ. ರಾಜ್​​ ಕುಟುಂಬಕ್ಕೆ ಬಲಗೈ ಬಂಟ ಆಗಿದ್ದರು’: ಎಸ್​.ಕೆ. ಭಗವಾನ್​​ ಕುರಿತ ನೆನಪು ತೆರೆದಿಟ್ಟ ಚಿನ್ನೇಗೌಡ

ಮದನ್​ ಕುಮಾರ್​
|

Updated on:Feb 20, 2023 | 4:04 PM

Share

S K Bhagavan Death: ಡಾ. ರಾಜ್​ಕುಮಾರ್​ ಫ್ಯಾಮಿಲಿಗೆ ಎಸ್​.ಕೆ. ಭಗವಾನ್​ ಅವರು ತುಂಬ ಆಪ್ತರಾಗಿದ್ದರು. ಆ ದಿನಗಳನ್ನು ನಿರ್ಮಾಪಕ ಎಸ್​.ಎ. ಚಿನ್ನೇಗೌಡ ಮೆಲುಕು ಹಾಕಿದ್ದಾರೆ.

ಖ್ಯಾತ ನಿರ್ದೇಶಕ ಎಸ್​.ಕೆ. ಭಗವಾನ್​ (S K Bhagavan) ಅವರ ನಿಧನದಿಂದ ಕನ್ನಡ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಇಂದು (ಫೆ.20) ಇಹಲೋಕ ತ್ಯಜಿಸಿದ ಅವರಿಗೆ ಚಂದನವನದ ಅನೇಕರು ನುಡಿ ನಮನ ಸಲ್ಲಿಸಿದ್ದಾರೆ. ನಿರ್ಮಾಪಕ ಎಸ್​.ಎ. ಚಿನ್ನೇಗೌಡ ಅವರು ಎಸ್​.ಕೆ. ಭಗವಾನ್​ ಕುರಿತು ನೆನಪುಗಳನ್ನು ಹಂಚಿಕೊಂಡಿದ್ದಾರೆ. ‘ನಮ್ಮ ಬಾವ ಡಾ. ರಾಜ್​ಕುಮಾರ್​ (Dr Rajkumar) ಅವರ ಕುಟುಂಬಕ್ಕೆ ಭಗವಾನ್​ ಆಪ್ತರಾಗಿದ್ದರು. ಶಿವರಾಜ್​ಕುಮಾರ್​ ಹುಟ್ಟಿದಾಗಿನಿಂದಲೂ ನಮ್ಮ ಕುಟುಂಬಕ್ಕೆ ಅವರು ಹತ್ತಿರವಾಗಿದ್ದರು. ಮದ್ರಾಸ್​ನಲ್ಲಿ ಇದ್ದಾಗ ಅಣ್ಣಾವ್ರ ಮನೆಯ ಎಲ್ಲ ಆಗು-ಹೋಗುಗಳನ್ನು ಅವರು ನೋಡಿಕೊಳ್ಳುತ್ತಿದ್ದರು. ನಮ್ಮ ಅಕ್ಕ ಪಾರ್ವತಮ್ಮನವರಿಗೆ ಮತ್ತು ರಾಜ್​ಕುಮಾರ್​ ಅವರಿಗೆ ಬಲಗೈ ಬಂಟನಂತೆ ಇದ್ದವರು ಭಗವಾನ್​’ ಎಂದು ಚಿನ್ನೇಗೌಡ (SA Chinne Gowda) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Feb 20, 2023 04:04 PM

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More