AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನರನ್ನು ಇನ್ನೂ ಯಾಕೆ ಉಚ್ಚಾಟಿಸಿಲ್ಲ ಅಂತ ಕೇಳಿದರೆ ಅಶ್ವಥ್ ನಾರಾಯಣ ಸಮಂಜಸ ಉತ್ತರ ನೀಡಲಿಲ್ಲ

ಮುನಿರತ್ನರನ್ನು ಇನ್ನೂ ಯಾಕೆ ಉಚ್ಚಾಟಿಸಿಲ್ಲ ಅಂತ ಕೇಳಿದರೆ ಅಶ್ವಥ್ ನಾರಾಯಣ ಸಮಂಜಸ ಉತ್ತರ ನೀಡಲಿಲ್ಲ

ಅರುಣ್​ ಕುಮಾರ್​ ಬೆಳ್ಳಿ
|

Updated on: May 28, 2025 | 4:09 PM

ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡಿದ ಅಶ್ವಥ್ ನಾರಾಯಣ, ಕಾಂಗ್ರೆಸ್ ಕೇವಲ ಅಧಿಕಾರಕ್ಕೆ ಬರಲು ಜನರಿಗೆ ಇಲ್ಲದ ಆಮಿಶಗಳನ್ನೊಡ್ಡಿ, ಅವರ ಕೈಕಾಲು ಹಿಡಿಯಿತು, ಈಗ ಯೋಜನೆಗಳ ವಿಷಯದಲ್ಲಿ ಯೂ-ಟರ್ನ್ ಹೊಡೆಯುವ ಹುನ್ನಾರ ನಡೆಸಿದೆ, ಅದನ್ನೇ ಮಾಡೋದಾದರೆ ಸರ್ಕಾರ ವಿಧಾನ ಸಭೆಯನ್ನು ವಿಸರ್ಜಿಸಿ ಮತದಾರರಿಗೆ ಆಮಿಷಗಳನ್ನೊಡದೆ ಚುನಾವಣೆ ಎದುರಿಸಲಿ ಎಂದು ಸವಾಲೊಡ್ಡಿದರು.

ಬೆಂಗಳೂರು, ಮೇ 28: ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿನ್ನೆ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ (Shivaram Hebbar) ಅವರನ್ನು 6-ವರ್ಷ ಅವಧಿಗೆ ಉಚ್ಚಾಟನೆ ಮಾಡಿರುವ ಬಗ್ಗೆ ಪ್ರತಿಕ್ರಿಯೆಗಳು ಇವತ್ತು ಕೂಡ ವ್ಯಕ್ತವಾಗುತ್ತಿವೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಅ ಇಬ್ಬರು ಶಾಸಕರು ತೊಡಗಿದ್ದರು, ಹಾಗಾಗಿ ಶಿಸ್ತು ಸಮಿತಿ ಪಕ್ಷದಿಂದ ಉಚ್ಚಾಟಿಸಿದೆ ಎಂದು ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಹೇಳಿದರು. ಅದರೆ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಎಫ್​ಐಅರ್ ಆಗಿರುವ ಮುನಿರತ್ನ ಅವರನ್ನು ಪಕ್ಷದಲ್ಲಿ ಉಳಿಸಿಕೊಂಡಿರುವ ಬಗ್ಗೆ ಕೇಳಿದಾಗ ಶಾಸಕ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ,

ಇದನ್ನೂ ಓದಿ:    ಈ ಸರ್ಕಾರ ಅಧಿಕಾರದಲ್ಲಿದ್ದರೆ ಹೆಚ್ಎಂಪಿವಿಯಿಂದ ಭಗವಂತನೇ ಜನರನ್ನು ಕಾಪಾಡಬೇಕು: ಡಾ ಸಿಎನ್ ಅಶ್ವಥ್ ನಾರಾಯಣ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ