ಬೆಂಗಳೂರು: ಬಿಜೆಪಿ ಕಚೇರಿಗೆ ಇಂದು ಅನಿರೀಕ್ಷಿತ ಭೇಟಿ ನೀಡಿದಾಗಲೂ ಡಾ ಸಿಎನ್ ಮಂಜುನಾಥ್ ಟೈ ಧರಿಸಿದ್ದರು!

ಬೆಂಗಳೂರು: ಬಿಜೆಪಿ ಕಚೇರಿಗೆ ಇಂದು ಅನಿರೀಕ್ಷಿತ ಭೇಟಿ ನೀಡಿದಾಗಲೂ ಡಾ ಸಿಎನ್ ಮಂಜುನಾಥ್ ಟೈ ಧರಿಸಿದ್ದರು!
|

Updated on: May 27, 2024 | 3:08 PM

ನಿಮಗೆ ನೆನಪಿರಬಹುದು, ಡಾ ಮಂಜುನಾಥ್ ಇನ್ನೂ ಸೇವೆಯಲ್ಲಿದ್ದ ದಿನಗಳಲ್ಲಿ ಆಗಷ್ಟೆ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದ ಸಿದ್ದರಾಮಯ್ಯರನ್ನು ಭೇಟಿಯಾಗಲು ಸೂಟ್ ಧರಿಸಿ ಹೋಗಿದ್ದರು. ಹಾಗಾಗೇ ನಾವು ಅವರನ್ನು ಶಿಸ್ತಿನ ವ್ಯಕ್ತಿ ಅಂತ ಹೇಳುತ್ತಿರೋದು.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ (Dr CN Manjunath) ಇಂದು ನಗರದ ಮ್ಲಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ (BJP office) ಭೇಟಿ ನೀಡಿದರು. ಅವರ ಭೇಟಿ ಅನಿರೀಕ್ಷಿತವಾಗಿತ್ತು ಅನಿಸುತ್ತೆ. ಅವರು ಕಚೇರಿಯಲ್ಲಿ ಕಾಲಿಟ್ಟಾಗ ಕೆಲ ಪದಾಧಿಕಾರಿಗಳು ಮಾತ್ರ ಅಲ್ಲಿದ್ದರು. ತಾವು ಭೇಟಿ ನೀಡುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೆ ಮಲ್ಲೇಶ್ವರಂನಲ್ಲೇ ವಾಸವಾಗಿರುವ ಸ್ಥಳೀಯ ಬಿಜೆಪಿ ಶಾಸಕ ಡಾ ಸಿಎನ್ ಅಶ್ವತ್ ನಾರಾಯಣ (Dr CN Ashwath Narayan) ಕಚೇರಿಗೆ ಬಂದಿರುತ್ತಿದ್ದರು. ಡಾ ಮಂಜುನಾಥ್ ನಿಸ್ಸಂದೇಹವಾಗಿ ಭಾರೀ ಶಿಸ್ತಿ ಮನುಷ್ಯ ಮಾರಾಯ್ರೇ. ಬಿಜೆಪಿ ಕಚೇರಿಗೆ ಅವರು ಅನೌಪಚಾರಿಕ ಭೇಟಿ ನೀಡಿದ್ದರೂ ಟೈ ಧರಿಸಿದ್ದಾರೆ. ವೃತ್ತಿಪರತೆ ಅವರಿಗೆ ನಮ್ಮ ರಾಜಕಾರಣಿಗಳಿಗಿಂತ ಬಹಳ ಚೆನ್ನಾಗಿ ಗೊತ್ತು. ಕೇವಲ ಖಾದಿ ತೊಟ್ಟವರು ಮಾತ್ರ ರಾಜಕಾರಣಿ ಅನಿಸಿಕೊಳ್ಳಲಾರರು. ನಿಮಗೆ ನೆನಪಿರಬಹುದು, ಡಾ ಮಂಜುನಾಥ್ ಇನ್ನೂ ಸೇವೆಯಲ್ಲಿದ್ದ ದಿನಗಳಲ್ಲಿ ಆಗಷ್ಟೆ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದ ಸಿದ್ದರಾಮಯ್ಯರನ್ನು ಭೇಟಿಯಾಗಲು ಸೂಟ್ ಧರಿಸಿ ಹೋಗಿದ್ದರು. ಹಾಗಾಗೇ ನಾವು ಅವರನ್ನು ಶಿಸ್ತಿನ ವ್ಯಕ್ತಿ ಅಂತ ಹೇಳುತ್ತಿರೋದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ