ಬೆಂಗಳೂರು: ಬಿಜೆಪಿ ಕಚೇರಿಗೆ ಇಂದು ಅನಿರೀಕ್ಷಿತ ಭೇಟಿ ನೀಡಿದಾಗಲೂ ಡಾ ಸಿಎನ್ ಮಂಜುನಾಥ್ ಟೈ ಧರಿಸಿದ್ದರು!

ಅರುಣ್​ ಕುಮಾರ್​ ಬೆಳ್ಳಿ

Updated on: May 27, 2024 | 3:08 PM

ನಿಮಗೆ ನೆನಪಿರಬಹುದು, ಡಾ ಮಂಜುನಾಥ್ ಇನ್ನೂ ಸೇವೆಯಲ್ಲಿದ್ದ ದಿನಗಳಲ್ಲಿ ಆಗಷ್ಟೆ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದ ಸಿದ್ದರಾಮಯ್ಯರನ್ನು ಭೇಟಿಯಾಗಲು ಸೂಟ್ ಧರಿಸಿ ಹೋಗಿದ್ದರು. ಹಾಗಾಗೇ ನಾವು ಅವರನ್ನು ಶಿಸ್ತಿನ ವ್ಯಕ್ತಿ ಅಂತ ಹೇಳುತ್ತಿರೋದು.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ (Dr CN Manjunath) ಇಂದು ನಗರದ ಮ್ಲಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ (BJP office) ಭೇಟಿ ನೀಡಿದರು. ಅವರ ಭೇಟಿ ಅನಿರೀಕ್ಷಿತವಾಗಿತ್ತು ಅನಿಸುತ್ತೆ. ಅವರು ಕಚೇರಿಯಲ್ಲಿ ಕಾಲಿಟ್ಟಾಗ ಕೆಲ ಪದಾಧಿಕಾರಿಗಳು ಮಾತ್ರ ಅಲ್ಲಿದ್ದರು. ತಾವು ಭೇಟಿ ನೀಡುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೆ ಮಲ್ಲೇಶ್ವರಂನಲ್ಲೇ ವಾಸವಾಗಿರುವ ಸ್ಥಳೀಯ ಬಿಜೆಪಿ ಶಾಸಕ ಡಾ ಸಿಎನ್ ಅಶ್ವತ್ ನಾರಾಯಣ (Dr CN Ashwath Narayan) ಕಚೇರಿಗೆ ಬಂದಿರುತ್ತಿದ್ದರು. ಡಾ ಮಂಜುನಾಥ್ ನಿಸ್ಸಂದೇಹವಾಗಿ ಭಾರೀ ಶಿಸ್ತಿ ಮನುಷ್ಯ ಮಾರಾಯ್ರೇ. ಬಿಜೆಪಿ ಕಚೇರಿಗೆ ಅವರು ಅನೌಪಚಾರಿಕ ಭೇಟಿ ನೀಡಿದ್ದರೂ ಟೈ ಧರಿಸಿದ್ದಾರೆ. ವೃತ್ತಿಪರತೆ ಅವರಿಗೆ ನಮ್ಮ ರಾಜಕಾರಣಿಗಳಿಗಿಂತ ಬಹಳ ಚೆನ್ನಾಗಿ ಗೊತ್ತು. ಕೇವಲ ಖಾದಿ ತೊಟ್ಟವರು ಮಾತ್ರ ರಾಜಕಾರಣಿ ಅನಿಸಿಕೊಳ್ಳಲಾರರು. ನಿಮಗೆ ನೆನಪಿರಬಹುದು, ಡಾ ಮಂಜುನಾಥ್ ಇನ್ನೂ ಸೇವೆಯಲ್ಲಿದ್ದ ದಿನಗಳಲ್ಲಿ ಆಗಷ್ಟೆ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದ ಸಿದ್ದರಾಮಯ್ಯರನ್ನು ಭೇಟಿಯಾಗಲು ಸೂಟ್ ಧರಿಸಿ ಹೋಗಿದ್ದರು. ಹಾಗಾಗೇ ನಾವು ಅವರನ್ನು ಶಿಸ್ತಿನ ವ್ಯಕ್ತಿ ಅಂತ ಹೇಳುತ್ತಿರೋದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.