Video: ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?

Updated on: Feb 21, 2026 | 6:18 PM

ಡಾ.ಗುರುರಾಜ ಕರ್ಜಗಿ ಅವರು ಅಂಕಗಳಿಗಿಂತ ಜ್ಞಾನ ಸಂಪಾದನೆಗೆ ಒತ್ತು ನೀಡುತ್ತಾರೆ. ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸ ಕಾಪಾಡಿಕೊಳ್ಳುವುದು, ಮರೆವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಮತ್ತು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳದೆ ಸ್ವಯಂ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳುವುದರ ಮಹತ್ವವನ್ನು ವಿವರಿಸಿದ್ದಾರೆ. ಶ್ರದ್ಧೆಯಿಂದ ಓದಿ, ಆಸಕ್ತಿ ವೃದ್ಧಿಸಿಕೊಳ್ಳುವ ಮೂಲಕ ಯಶಸ್ಸು ಗಳಿಸಬಹುದು.

ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಎದುರಾಗುವ ಸವಾಲುಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಅವರು ಅಂಕಗಳಿಗಿಂತ ಜ್ಞಾನ ಸಂಪಾದನೆ ಹೆಚ್ಚು ಮುಖ್ಯ ಎಂದು ಪ್ರತಿಪಾದಿಸಿದ್ದಾರೆ. ಸಚಿನ್ ತೆಂಡೂಲ್ಕರ್, ಅಣ್ಣಾ ಹಜಾರೆ ಮತ್ತು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹವರ ಉದಾಹರಣೆಗಳನ್ನು ನೀಡಿ, ಜೀವನದಲ್ಲಿ ಅಂಕಗಳಷ್ಟೇ ನಿರ್ಣಾಯಕವಲ್ಲ ಎಂದು ತಿಳಿಸಿದ್ದಾರೆ.

ಆತ್ಮವಿಶ್ವಾಸ ನಮ್ಮೊಳಗೆ ಇರಬೇಕು ಮತ್ತು ಇತರರೊಂದಿಗೆ ಹೋಲಿಸಿಕೊಳ್ಳುವುದನ್ನು ತಪ್ಪಿಸಬೇಕು. ಸ್ವಯಂ ಸ್ಪರ್ಧೆಯು ಯಶಸ್ಸಿಗೆ ಮುಖ್ಯ. ವಿಷಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಮೂಲಕ ಮತ್ತು ಹಿಂದಿನ ತರಗತಿಗಳ ಅಡಿಪಾಯವನ್ನು ಬಲಪಡಿಸುವ ಮೂಲಕ ಮರೆವಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಜ್ಞಾನವನ್ನು ಬೆನ್ನತ್ತಿದರೆ ಯಶಸ್ಸು ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ

 

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More