AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಆಕೆಯೇ ಕಾರಣ! ಅವರ ಜೀವನದ ಅದೃಷ್ಟ ಲಕ್ಷ್ಮಿ ಎಂದ ಸುಧಾಕರ್

ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಆಕೆಯೇ ಕಾರಣ! ಅವರ ಜೀವನದ ಅದೃಷ್ಟ ಲಕ್ಷ್ಮಿ ಎಂದ ಸುಧಾಕರ್

ಅಕ್ಷಯ್​ ಪಲ್ಲಮಜಲು​​
|

Updated on: May 29, 2026 | 3:21 PM

Share

ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರು ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಸವಾಲುಗಳು ಮತ್ತು ಇತ್ತೀಚಿನ ಅದೃಷ್ಟದ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರ ರಾಜ್ಯ ರಾಜಕಾರಣದಲ್ಲಿ ಮುಂದುವರಿಯುವ ನಿರ್ಧಾರ ಡಿ.ಕೆ. ಶಿವಕುಮಾರ್ ಅವರಿಗೆ ಎಚ್ಚರಿಕೆ ಗಂಟೆ ಎಂದ ಸುಧಾಕರ್, ಮೊಮ್ಮಗಳ ಜನನ ಡಿ.ಕೆ. ಶಿವಕುಮಾರ್ ಅವರಿಗೆ ಅದೃಷ್ಟ ಲಕ್ಷ್ಮಿಯನ್ನು ತಂದಿದೆ ಎಂದು ಹೇಳಿದ್ದಾರೆ.

ಬೆಂಗಳೂರು, ಮೇ.29: ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಮತ್ತು ಇತ್ತೀಚಿನ ವೈಯಕ್ತಿಕ ಘಟನೆಗಳ ಕುರಿತು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವ ನಿರ್ಧಾರ ಡಿ.ಕೆ. ಶಿವಕುಮಾರ್ ಅವರ ಆಡಳಿತಕ್ಕೆ ಒಂದು ರೀತಿಯಲ್ಲಿ ಎಚ್ಚರಿಕೆ ಗಂಟೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಡಾ. ಸುಧಾಕರ್ ಪ್ರಕಾರ, ಸಿದ್ದರಾಮಯ್ಯ ಅವರನ್ನು ಜೊತೆಗೆ ಕರೆದುಕೊಂಡು ಮುಂದಿನ ಎರಡು ವರ್ಷಗಳನ್ನು ಪೂರೈಸುವುದು ಮತ್ತು 2028ರ ಚುನಾವಣೆಯಲ್ಲಿ ಅವರ ಸಹಕಾರ ಪಡೆಯುವುದು ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ಸವಾಲುಗಳು. ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಎದುರಿಸಬೇಕಾದ ಒತ್ತಡಗಳ ಬಗ್ಗೆಯೂ ಅವರು ಉಲ್ಲೇಖಿಸಿದ್ದಾರೆ. ಅದೇ ಸಮಯದಲ್ಲಿ, ಡಿ.ಕೆ. ಶಿವಕುಮಾರ್ ಅವರ ಹೋರಾಟ ಮತ್ತು ದೃಢಸಂಕಲ್ಪವನ್ನು ಸುಧಾಕರ್ ಶ್ಲಾಘಿಸಿದ್ದಾರೆ. ಇತ್ತೀಚೆಗೆ ಎಸ್.ಎಂ. ಕೃಷ್ಣ ಅವರ ಹುಟ್ಟುಹಬ್ಬದಂದೇ ಡಿ.ಕೆ. ಶಿವಕುಮಾರ್ ಅವರ ಮೊಮ್ಮಗಳು ಜನಿಸಿರುವುದನ್ನು ಪ್ರಸ್ತಾಪಿಸಿದ ಸುಧಾಕರ್, ಈ ಘಟನೆ ಅವರಿಗೆ “ಅದೃಷ್ಟ ಲಕ್ಷ್ಮಿ” ಯನ್ನು ತಂದಿದೆ ಎಂದು ಹೇಳಿ, ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More