Ramanagara: ಬಿಡದಿಯಲ್ಲಿ ಹಲವು ಸೌಲಭ್ಯಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 02, 2023 | 12:54 PM

ಸಚಿವರು ರಾಮನಗರ ಉಸ್ತುವಾರಿ ಸಚಿವ ಡಾ ಸಿ ಎನ್ ಆಶ್ವಥ್ ನಾರಾಯಣ ಶಾಸಕ ಎ ಮಂಜುನಾಥ ಹಾಗೂ ಹಲವು ಅಧಿಕಾರಿಗಳ ಜೊತೆಗೂಡಿ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು.

ರಾಮನಗರ: ಜಿಲ್ಲೆಯ ಬಿಡದಿಯಲ್ಲಿ ಬಹು ಸೌಲಭ್ಯಗಳ ಸಮುದಾಯ ಆರೋಗ್ಯ ಕೇಂದ್ರವೊಂದನ್ನು ಅರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಇಂದು ಬೆಳಗ್ಗೆ ಉದ್ಘಾಟಿಸಿದರು. ನಂತರ ಸಚಿವರು ರಾಮನಗರ ಉಸ್ತುವಾರಿ ಸಚಿವ ಡಾ ಸಿ ಎನ್ ಆಶ್ವಥ್ ನಾರಾಯಣ (Dr CN Ashwath Narayan), ಶಾಸಕ ಎ ಮಂಜುನಾಥ (A Manjunath) ಹಾಗೂ ಹಲವು ಅಧಿಕಾರಿಗಳ ಜೊತೆಗೂಡಿ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಕೇಂದ್ರದ ಬಗ್ಗೆ ಕೆಲ ವಿವರಗಳನ್ನು ಸುಧಾಕರ್ ಅವರಿಗೆ ಮತ್ತು ಆರೋಗ್ಯ ಸಚಿವರು ಕೆಲ ಸಲಹೆ ಅಧಿಕಾರಿಗಳಿಗೆ ನೀಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.