ಪ್ರದೀಪ್ ಈಶ್ವರ್​ರನ್ನು ಪರೋಕ್ಷವಾಗಿ ಅಯೋಗ್ಯ ಎಂದ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 26, 2024 | 2:33 PM

ಇವತ್ತು ದೇವನಹಳ್ಳಿಯಲ್ಲಿದ್ದ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರದೀಪ್ ಈಶ್ವರ್ ಮಾಡುತ್ತಿರುವ ಕಾಮೆಂಟ್ ಗಳ ಬಗ್ಗೆ ಕೇಳಿದಾಗ ಅವರು ಕೂಲಾಗಿ, ಯೋಗ್ಯರು ಯಾರಾದರೂ ಕಾಮೆಂಟ್ ಮಾಡಿದ್ದರೆ ಹೇಳಿ ಪ್ರತಿಕ್ರಿಯೆ ನೀಡುತ್ತೇನೆ, ಒಳ್ಳೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇವೆ, ಒಳ್ಳೆಯ ಮಾತಾಡೋಣ ಅಂತ ಹೇಳಿದರು

ದೇವನಹಳ್ಳಿ: ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮತ್ತು ಅದೇ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ (Dr K Sudhakar) ನಡುವೆ ಇರುವ ಜಗಳ, ಕಾದಾಟಕ್ಕೆ ಒಂದು ವರ್ಷದ ಆಯಸ್ಸಿರಬಹುದು. ವಿಧಾನಸಭಾ ಚುನಾವಣೆಯಲ್ಲಿ (Assembly Polls) ಅವರು ಪ್ರತಿಸ್ಪರ್ಧಿಗಳಾಗಿ ಕಣಕ್ಕಿಳಿದಾಗ ಶುರುವಾದ ಕಲಹ ಈಗಲೂ ಮುಂದುವರಿದಿದೆ. ಸುಧಾಕರ್ ಗೆ ಬಿಜೆಪಿ ಟಿಕೆಟ್ ನೀಡಿದ ಬಳಿಕ ಅವರನ್ನು ತೆಗಳಲೆಂದೇ ಪ್ರದೀಪ್ ಎರಡು ಬಾರಿ ಸುದ್ದಿಗೋಷ್ಟಿ ನಡೆಸಿದರು. ಅವರು ಏನು ಮಾತಾಡಿದರೆನ್ನುವುದನ್ನು ನಾವು ವರದಿ ಮಾಡಿದ್ದೇವೆ. ಈಶ್ವರ್ ವಾಗ್ದಾಳಿಯಿಂದ ವಿಚಲಿತರಾಗದ, ತಲೆಕೆಡಿಸಿಕೊಳ್ಳದ ಸುಧಾಕರ್ ಕ್ಷೇತ್ರದಲ್ಲಿ ಸುತ್ತಾಡಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸ ಗೆಲ್ಲುವ ಕೆಲಸ ಮಾಡುತ್ತಿದ್ದಾರೆ. ಇವತ್ತು ದೇವನಹಳ್ಳಿಯಲ್ಲಿದ್ದ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರದೀಪ್ ಈಶ್ವರ್ ಮಾಡುತ್ತಿರುವ ಕಾಮೆಂಟ್ ಗಳ ಬಗ್ಗೆ ಕೇಳಿದಾಗ ಅವರು ಕೂಲಾಗಿ, ಯೋಗ್ಯರು ಯಾರಾದರೂ ಕಾಮೆಂಟ್ ಮಾಡಿದ್ದರೆ ಹೇಳಿ ಪ್ರತಿಕ್ರಿಯೆ ನೀಡುತ್ತೇನೆ, ಒಳ್ಳೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇವೆ, ಒಳ್ಳೆಯ ಮಾತಾಡೋಣ ಅಂತ ಹೇಳಿದರು. ಅದು ಸರಿ, ಆದರೆ ಸುಧಾಕರ್ ಗೆ ಇರುವ ಪ್ರಮುಖ ತೊಂದರೆ, ಅಡಚಣೆ ಎಂದರೆ ಅವರದ್ದೇ ಪಕ್ಷದ ಕಾರ್ಯಕರ್ತರು. ಹಲವಾರು ಕಡೆ ಕಾರ್ಯಕರ್ತರು ಗೋ ಬ್ಯಾಕ್ ಸುಧಾಕರ್ ಅಭಿಯಾನ ಶುರುಮಾಡಿದ್ದಾರೆ, ಅವರನ್ನು ಸಮಾಧಾನಪಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಸುಧಾಕರ್ ಮುಂದಿರುವ ದೊಡ್ಡ ಸವಾಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಯಾವುದೇ ಹಗರಣ ಮಾಡಿಲ್ಲವೆಂದು ಸುಧಾಕರ್ ಆಣೆ ಪ್ರಮಾಣ ಮಾಡ್ತಾರಾ? ಪ್ರದೀಪ್ ಈಶ್ವರ್ ಸವಾಲ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.