ಸಂಸದ ಡಾ.ಕೆ ಸುಧಾಕರ್​ಗೆ ನೆಲಮಂಗಲದಲ್ಲಿ ಅಭಿನಂದನಾ ಕಾರ್ಯಕ್ರಮ; ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 07, 2024 | 5:38 PM

ಇಂದು(ಭಾನುವಾರ) ಮೈತ್ರಿ ಪಕ್ಷದಿಂದ ನೆಲಮಂಗಲದಲ್ಲಿ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್‌ ಗೆಲುವು ಹಿನ್ನಲೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಕಾರ್ಯಕ್ರಮಕ್ಕೆ ಬಂದವರಿಗೆ ಭರ್ಜರಿ ಬಾಡೂಟ ಜೊತೆಗೆ ಎಣ್ಣೆಯನ್ನು ಕೂಡ ಆಯೋಜಿಸಲಾಗಿತ್ತು.

ಬೆಂಗಳೂರು, ಜು.07: ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್‌ ಗೆಲುವು ಹಿನ್ನಲೆ ಇಂದು(ಭಾನುವಾರ) ಮೈತ್ರಿ ಪಕ್ಷದಿಂದ ನೆಲಮಂಗಲದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಕಾರ್ಯಕ್ರಮಕ್ಕೆ ಬಂದವರಿಗೆ ಭರ್ಜರಿ ಬಾಡೂಟ ಜೊತೆಗೆ ಎಣ್ಣೆಯನ್ನು ಕೂಡ ಆಯೋಜಿಸಲಾಗಿತ್ತು. ಇನ್ನು ಉಚಿತ ಎಣ್ಣೆಗಾಗಿ ಮುಗಿಬಿದ್ದ ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತಾಯಿತು. ಈ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ನೆಲಮಂಗಲ ಮಾಜಿ ಶಾಸಕರಾದ ನಾಗರಾಜು, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ ಸೇರಿದಂತೆ ಮೈತ್ರಿ  ಪಕ್ಷದ ಹಿರಿಯ ಮುಖಂಡರು, ಮಾಜಿ ಶಾಸಕರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Sun, 7 July 24

Follow us on