‘ಡಾ. ರಾಜ್​ಕುಮಾರ್​ ನೋಡಿ ಮೆಚ್ಚಿದ್ದ ಧಾರಾವಾಹಿ ಅದು’; ಅಪರೂಪದ ಕ್ಷಣ ನೆನಪಿಸಿಕೊಂಡ ಶ್ರೀದೇವಿ

‘ಮನೆತನ’ ಸೀರಿಯಲ್​ನಲ್ಲಿ ಶ್ರೀದೇವಿ ನಟಿಸುತ್ತಿದ್ದರು. ಆ ಧಾರಾವಾಹಿಯನ್ನು ಡಾ. ರಾಜ್​ಕುಮಾರ್​ ಕೂಡ ನೋಡುತ್ತಿದ್ದರು. ಓಮ್ಮೆ ಭೇಟಿಯಾದ ಸಂದರ್ಭದಲ್ಲಿ ‘ಮನೆತನ’ ಧಾರಾವಾಹಿ ಬಗ್ಗೆ ಅಣ್ಣಾವ್ರು ಮಾತನಾಡಿದ್ದರು ಎಂದು ಶ್ರೀದೇವಿ ಹೇಳಿದ್ದಾರೆ.

‘ಡಾ. ರಾಜ್​ಕುಮಾರ್​ ನೋಡಿ ಮೆಚ್ಚಿದ್ದ ಧಾರಾವಾಹಿ ಅದು’; ಅಪರೂಪದ ಕ್ಷಣ ನೆನಪಿಸಿಕೊಂಡ ಶ್ರೀದೇವಿ
| Updated By: ಮದನ್​ ಕುಮಾರ್​

Updated on: Aug 31, 2021 | 1:03 PM

ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟಿ ಶ್ರೀದೇವಿ ಅವರು ಬಳಿಕ ಚಿತ್ರರಂಗದಿಂದ ಅಂತರ ಕಾಯ್ದುಕೊಂಡರು. ಧಾರಾವಾಹಿಗಳ ಮೂಲಕವೂ ಅವರು ಫೇಮಸ್​ ಆಗಿದ್ದರು.​ ಈಗ ಟಿವಿ9​ ಜೊತೆ ಮಾತನಾಡಿರುವ ಅವರು ಕೆಲವು ಅಪರೂಪದ ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದಿಂದ ನಿರ್ಮಾಣವಾದ ಹಲವು ಸಿನಿಮಾಗಳಿಗೆ ಶ್ರೀದೇವಿ ಡಬ್ಬಿಂಗ್​ ಮಾಡಿದ್ದರು. ರಾಘವೇಂದ್ರ ರಾಜ್​ಕುಮಾರ್​ ನಟನೆಯ ‘ಅನುಕೂಲಕ್ಕೊಬ್ಬ ಗಂಡ’ ಸಿನಿಮಾದಲ್ಲಿ ಅವರು ನಟಿಸಿದ್ದರು.

‘ಮನೆತನ ಎಂಬ ಜನಪ್ರಿಯ ಸೀರಿಯಲ್​ನಲ್ಲಿ ನಾನು ನಟಿಸುತ್ತಿದ್ದೆ. ಅದರಲ್ಲಿ ಪಂಡರೀಬಾಯಿ, ಕಲ್ಯಾಣ್​ ಕುಮಾರ್​, ಪ್ರೊಫೆಸರ್​ ದೊಡ್ಡ ರಂಗೇಗೌಡ ಮುಂತಾದವರು ನಟಿಸುತ್ತಿದ್ದರು. ಆಗ ಒಂದು ಕಾರ್ಯಕ್ರಮದಲ್ಲಿ ರಾಜ್​ಕುಮಾರ್​ ಅವರು ಸಿಕ್ಕಿದ್ದರು. ಚೆನ್ನಾಗಿದ್ದೀರಾ ಎಂದು ಮಾತನಾಡಿಸಿದಾಗ, ನಿಮ್ಮ ಸೀರಿಯಲ್​ ನೋಡುತ್ತೇನೆ ಎಂದು ಅವರು ಹೇಳಿದರು. ಇಂಥ ದೊಡ್ಡ ಕಲಾವಿದರು ನಮ್ಮ ಧಾರಾವಾಹಿ ನೋಡುತ್ತಾರಾ ಅಂತ ಅಚ್ಚರಿಗೊಂಡು ಸಿಕ್ಕಾಪಟ್ಟೆ ಸಂತೋಷ ಆಯಿತು. ಅದು ನನಗೆ ಸಿಕ್ಕ ಬಹುದೊಡ್ಡ ಮೆಚ್ಚುಗೆ’ ಎಂದು ಶ್ರೀದೇವಿ ಅವರು ಆ ದಿನಗಳನ್ನು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ:

ಡಾ. ರಾಜ್​ಕುಮಾರ್​ ಜತೆ ದಿಲೀಪ್​ ಕುಮಾರ್​ಗೆ ಇದ್ದ ಒಡನಾಟ ಎಂಥದ್ದು? ಫೋಟೋ ಸಹಿತ ವಿವರಿಸಿದ ಪುನೀತ್​

ಕಲಾವಿದ ರಚಿಸಿದ ಡಾ. ರಾಜ್​ ಅವರ ಈ ಅದ್ಭುತ ಚಿತ್ರದಲ್ಲಿದೆ ಬೆರಗಾಗುವಂತಹ ವಿಶೇಷ; ಗುರುತಿಸಬಲ್ಲಿರಾ?

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ