ತೀವ್ರ ಸ್ವರೂಪ ಪಡೆದ ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ

Updated on: Jun 23, 2025 | 10:49 PM

ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪುತ್ರ, ಗನ್‌ಮ್ಯಾನ್‌, ಚಾಲಕನನ ಹಲ್ಲೆ ಪ್ರಕರಣ ತೋವ್ರ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ ಐಆರ್ ದಾಖಲಾಗಿದೆ. ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಚಾಲಕ ಕಾರು ನಿಲ್ಲಿಸಿ, ಮತ್ತೋರ್ವ ಕಾರಿನವರ ಮೇಲೆ ಹಲ್ಲೆ ನಡೆಸಿದ್ದಾರೆ.

ನೆಲಮಂಗಲ, (ಜೂನ್ 23): ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪುತ್ರ, ಗನ್‌ಮ್ಯಾನ್‌, ಚಾಲಕನನ ಹಲ್ಲೆ ಪ್ರಕರಣ ತೋವ್ರ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ ಐಆರ್ ದಾಖಲಾಗಿದೆ. ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಚಾಲಕ ಕಾರು ನಿಲ್ಲಿಸಿ, ಮತ್ತೋರ್ವ ಕಾರಿನವರ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಹಾಗೂ ಗನ್ ಮ್ಯಾನ್ ಸೇರಿಕೊಂಡು ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂದ ಅನಂತ್ ಕುಮಾರ್ ಹೆಗಡೆ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ ಪೊಲೀಸ್ ಠಾಣೆಯಿಂದ ಅನಂತ ಕುಮಾರ್ ಹೆಗಡೆ ಅವರನ್ನು ಬಿಟ್ಟು ಕಳುಹಿಸಿದ್ದಕ್ಕೆ ಹಲ್ಲೆಗೊಳಗಾದ ಕುಟುಂಬದವರು ದಾಬಸ್‌ಪೇಟೆ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅನಂತ್‌ಕುಮಾರ್‌ ಹೆಗಡೆ ಬಂಧಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಮನವೊಲಿಸುತ್ತಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More