ಕೆಲಸದಿಂದ ತೆಗೆದುಹಾಕಿದ ಕಾರಣಕ್ಕೆ ಪ್ರತಿಮಾರನ್ನು ಅವರ ಕಾರು ಚಾಲಕ ಕಿರಣ್ ಹತ್ಯೆಗೈದ: ರಾಹುಲ್ ಕುಮಾರ್, ಡಿಸಿಪಿ
ಕೆಲಸ ಹೋದ ಕಾರಣ ಕಿರಣ್ ಹೆಂಡತಿ ಅವನನ್ನು ತೊರೆದು ತವರು ಮನೆಗೆ ಹೋಗಿದ್ದಳು, ಹೀಗೆ, ಹತಾಶೆಯ ಮಡುವಿನಲ್ಲಿದ್ದ ಅವನು ಪ್ರತಿಮಾ ಅವರನ್ನು ಕಚೇರಿಯಲ್ಲಿ ಕಂಡು ಮಾತಾಡಿ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾನೆ. ಆದರೆ ಅಧಿಕಾರಿ ನಿರಾಕರಿಸಿದ್ದಾರೆ. ನಂತರ ಕಿರಣ್ ನವೆಂಬರ್ 3 ರಂದು ಪ್ರತಿಮಾರನ್ನು ಅವರ ಮನೆಯಲ್ಲಿ ಭೇಟಿ ಮಾಡಲು ಪ್ರಯತ್ನಿಸಿದ್ದಾನೆ ಆದರೆ ಸಾಧ್ಯವಾಗಿಲ್ಲ.
ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಉಪ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದ ಪ್ರತಿಮಾ (Pratima) ಕೊಲೆ ಪ್ರಕರಣವನ್ನು ನಗರದ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ (DCP Rahul Kumar), ಅನುಮಾನದ ಹಿನ್ನೆಲೆಯಲ್ಲಿ ಪ್ರತಿಮಾ ಅವರು ಕಾರು ಡ್ರೈವರ್ ಆಗಿದ್ದ ಕಿರಣ್ ನನ್ನು (Kiran) ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವನು ಹತ್ಯೆ ನಡೆಸಿದ್ದನ್ನು ಅಂಗೀಕರಿಸಿದ್ದಾನೆ ಎಂದು ಹೇಳಿದರು. ವೃತ್ತಿಪರ ಕಾರಣಕ್ಕಾಗಿ ಪ್ರತಿಮಾ ಕೊಲೆ ನಡೆದಿದೆ ಎಂದ ರಾಹುಲ್ ಕುಮಾರ್, ಕಿರಣ್ ಸ್ವಭಾವ ಮತ್ತು ಅಧಿಕೃತ ಮಾಹಿತಿಯನ್ನು ಬೇರೆಯವರಿಗೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಯು ಗುತ್ತಿಗೆ ಆಧಾರದ ಮೇಲೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ನನ್ನು ಸುಮಾರು 2 ತಿಂಗಳ ಹಿಂದೆ ಕೆಲಸದಿಂದ ತೆಗೆದುಹಾಕಿದ್ದರು. ಕೆಲಸ ಹೋದ ಕಾರಣ ಕಿರಣ್ ಹೆಂಡತಿ ಅವನನ್ನು ತೊರೆದು ತವರು ಮನೆಗೆ ಹೋಗಿದ್ದಳು, ಹೀಗೆ, ಹತಾಶೆಯ ಮಡುವಿನಲ್ಲಿದ್ದ ಅವನು ಪ್ರತಿಮಾ ಅವರನ್ನು ಕಚೇರಿಯಲ್ಲಿ ಕಂಡು ಮಾತಾಡಿ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾನೆ. ಆದರೆ ಅಧಿಕಾರಿ ನಿರಾಕರಿಸಿದ್ದಾರೆ. ನಂತರ ಕಿರಣ್ ನವೆಂಬರ್ 3 ರಂದು ಪ್ರತಿಮಾರನ್ನು ಅವರ ಮನೆಯಲ್ಲಿ ಭೇಟಿ ಮಾಡಲು ಪ್ರಯತ್ನಿಸಿದ್ದಾನೆ ಆದರೆ ಸಾಧ್ಯವಾಗಿಲ್ಲ. 4ನೇ ತಾರೀಖು ಪ್ರತಿಮಾ ಮನೆಗೆ ಬರುವುದನ್ನು ಕಾಯುತ್ತಿದ್ದ ಅವನು ಅವರ ಹಿಂದೆಯೇ ಮನೆಯೊಳಗೆ ನುಗ್ಗಿ ಅವರ ದುಪ್ಪಟ್ಟಾ ಮತ್ತು ಮನೆಯಲ್ಲಿದ್ದ ಒಂದು ಆಯುಧದಿಂದ ಕೊಲೆ ಮಾಡಿದ್ದಾನೆ ಎಂದು ಡಿಸಿಪಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 06, 2023 04:55 PM
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
