Dangerous travel: ಉಡುಪಿ ಬಳಿಯ ಹೆದ್ದಾರಿಯಲ್ಲಿ ಟಾಪ್ ಮೇಲೆ ಜನರನ್ನು ಕೂರಿಸಿಕೊಂಡು ಅಪಾಯಕಾರಿಯಾಗಿ ಚಲಿಸಿದ ಕ್ರೂಸರ್ ಬಾಗಲಕೋಟೆಯದ್ದೇ?

ಈ ವಾಹನ ಎಲ್ಲಿಂದಾದರೂ ಹೊರಟಿರಲಿ; ರಸ್ತೆಯಲ್ಲಿ ಚೆಕ್ ಪೋಸ್ಟ್ ಅಗಲಿ, ಅಥವಾ ಪೊಲೀಸರಾಗಲಿ ಸಿಗಲೇ ಇಲ್ಲವೇ?

|

Updated on: Jun 02, 2023 | 2:12 PM

ಉಡುಪಿ: ಇಂಥ ದೃಶ್ಯಗಳು ಕೇವಲ ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ ಮಾತ್ರ ಕಾಣಿಸುತ್ತವೆ ಅಂತ ಯಾರಾದರೂ ಅಂದುಕೊಂಡರೆ ಅವರ ಊಹೆ ತಪ್ಪು. ಆಫ್ ಕೋರ್ಸ್, ವಿಡಿಯೋದಲ್ಲಿ ಕಾಣುತ್ತಿರುವ ವಾಹನ ಉತ್ತರ ಕರ್ನಾಟಕದ್ದೇ, ಬಾಗಲಕೋಟೆ ಅರ್ ಟಿಓ (Bagalkot RTO) ಪಾಸಿಂಗ್ ನಂಬರ್ (ಕೆಎ 29) ನಿಚ್ಚಳವಾಗಿ ಕಾಣುತ್ತದೆ. ಆದರೆ ಟಾಪ್ ಮೇಲೆ ಜನರನ್ನು ಕೂರಿಸಿಕೊಂಡು ಚಲಿಸುತ್ತಿರುವ ಕ್ರೂಸರ್ ವಾಹನ ಉಡುಪಿ ಜಿಲ್ಲೆ ಮೂಲಕ ಹಾದುಹೋಗುವ ಮುಳೂರು ಹೆದ್ದಾರಿಯಲ್ಲಿ (Mulur highway) ಅಪಾಯಕಾರಿಯಾಗಿ ಸಾಗುತ್ತಿದೆ. ಒಂದು ಪಕ್ಷ ಇದು ಬಾಗಲಕೋಟೆಯಿಂದಲೇ ಹೊರಟಿದ್ದರೆ ಇಷ್ಟು ದೂರದವರೆಗೆ ಜನ ಹೀಗೆ ನೇತಾಡಿಕೊಂಡೇ ಪ್ರಯಾಣಿಸಿದರೇ. ಪೂರ್ತಿ ಹಿಂದಿನವನನ್ನು ನೋಡಿ, ಸ್ಟೆಪ್ನಿ ಮೇಲೆ ಓಲಾಡುತ್ತಾ ಕೂತಿದ್ದಾನೆ! ಸೋಜಿಗ ಹುಟ್ಟಿಸುವ ಸಂಗತಿಯೇನೆಂದರೆ, ಈ ವಾಹನ ಎಲ್ಲಿಂದಾದರೂ ಹೊರಟಿರಲಿ; ರಸ್ತೆಯಲ್ಲಿ ಚೆಕ್ ಪೋಸ್ಟ್ ಅಗಲಿ, ಅಥವಾ ಪೊಲೀಸರಾಗಲಿ ಸಿಗಲೇ ಇಲ್ಲವೇ? ಅಂದಹಾಗೆ, ಸೋಶಿಯಲ್ ಮಿಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ ಮಾರಾಯ್ರೇ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ