‘ಇಲ್ಲಿಗೆ ಫುಲ್ ಸ್ಟಾಪ್’; ಅಂತ್ಯವಾಯ್ತು ಪ್ರತಾಪ್ ಹಾಗೂ ತನಿಷಾ ನಡುವಿನ ಗೆಳೆತನ

Updated on: Nov 07, 2023 | 3:05 PM

ತನಿಷಾ ಕುಪ್ಪಂಡ ಅವರ ಮೇಲೆ ಪ್ರತಾಪ್​ಗೆ ಅನುಮಾನ ಬಂದಿದೆ. ತಮ್ಮ ಜೊತೆ ಚೆನ್ನಾಗಿ ಇರುವ ಅವರು ಇತರರ ಜೊತೆ ತಮ್ಮ ಬಗ್ಗೆ ಮಾತನಾಡುತ್ತಾರೆ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಪ್ರತಾಪ್ ಅವರು ಓಪನ್ ಆಗಿ ಮಾತನಾಡಿದ್ದಾರೆ.

ತನಿಷಾ ಕುಪ್ಪಂಡ ಅವರ ಮೇಲೆ ಪ್ರತಾಪ್​ಗೆ ಅನುಮಾನ ಬಂದಿದೆ. ತಮ್ಮ ಜೊತೆ ಚೆನ್ನಾಗಿ ಇರುವ ಅವರು ಇತರರ ಜೊತೆ ತಮ್ಮ ಬಗ್ಗೆ ಮಾತನಾಡುತ್ತಾರೆ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಪ್ರತಾಪ್ ಅವರು ಓಪನ್ ಆಗಿ ಮಾತನಾಡಿದ್ದಾರೆ. ಇದರಿಂದ ತನಿಷಾ (Tanisha) ಹಾಗೂ ಪ್ರತಾಪ್ ಮಧ್ಯೆ ಜಗಳ ಏರ್ಪಟ್ಟಿದೆ. ‘ನೀನು ಮಾಡಿರೋದು ಬೆನ್ನಿಗೆ ಚೂರಿ ಹಾಕುವ ಕೆಲಸ. ದೀದಿ ಎಂದು ಸ್ಥಾನ ಕೊಟ್ಟಮೇಲೆ ಅದನ್ನು ಕಾಪಾಡಿಕೊಂಡು ಹೋಗಬೇಕು. ಎಲ್ಲವೂ ಇಲ್ಲಿಗೆ ಸ್ಟಾಪ್ ಆಗಲಿ’ ಎಂದಿದ್ದಾರೆ ತನಿಷಾ. ಈ ಮಾತು ಕೇಳಿ ಪ್ರತಾಪ್​ಗೆ ಬೇಸರ ಆಗಿದೆ. ಈ ಬಗ್ಗೆ ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Nov 07, 2023 03:04 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More