ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು

Updated on: May 06, 2025 | 11:59 AM

ಡ್ರೋನ್ ಪ್ರತಾಪ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದು ‘ಬಿಗ್ ಬಾಸ್’ ಮೂಲಕ. ಅವರ ಬಗ್ಗೆ ಇದ್ದ ನೆಗೆಟಿವ್ ಟಾಕ್ ಪಾಸಿಟಿವ್ ಆಗಿ ಬದಲಾಯಿತು. ಅವರ ಆಟ ಎಲ್ಲರೂ ಮೆಚ್ಚಿಕೊಂಡರು. ಈಗ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಮಿಂಚುತ್ತಿದ್ದಾರೆ.

ಡ್ರೋನ್ ಪ್ರತಾಪ್ (Drone Prathap)  ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಕಾಣಿಸಿಕೊಂಡು ಮಿಂಚಿದ್ದಾರೆ. ಬಿಗ್ ಬಾಸ್​ನಲ್ಲಿ ಗೆದ್ದ ಹಣವನ್ನು ಅವರು ಒಳ್ಳೆಯ ಕೆಲಸಕ್ಕೆ ಬಳಕೆ ಮಾಡಿಕೊಂಡಿದ್ದರು. ಈಗ ಈ ಬಗ್ಗೆ ಅವರ ತಂದೆ ಮಾತನಾಡಿದ್ದಾರೆ. ‘ಶೋನಿಂದ ಬಂದ ಹಣವನ್ನು ಬಡವರ ಸಹಾಯಕ್ಕೆ ಬಳಕೆ ಮಾಡಿಕೊಳ್ಳುತ್ತೇನೆ ಎಂದ. ನೀನು ಗಳಿಸಿದ ಹಣ, ಹೇಗೇ ಬೇಕಿದ್ದರೂ ಬಳಸಿಕೋ ಎಂದೆ. ಜೇಬಲ್ಲಿ ಹಣ ಇಲ್ಲದೆ ಇದ್ದರೂ ಬೇರೆಯವರಿಗೆ ಸಹಾಯ ಮಾಡುವ ಮನೋಭವಾ ಅವನದ್ದು’ ಎಂದು ಪ್ರತಾಪ್ ತಂದೆ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More