ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರಿಂದ ಡ್ರಗ್ಸ್ ವಿರುದ್ದ ಜಾಗೃತಿ; ನೋ ಡ್ರಗ್ಸ್ ಎಂದ ನಟ ಗಣೇಶ್

ಬೆಂಗಳೂರು ಪೊಲೀಸರು ನಾಗರಭಾವಿ ಸರ್ಕಲ್ ನಿಂದ ಜ್ಞಾನಭಾರತಿ ಪೊಲೀಸ್ ಠಾಣೆವರೆಗೂ ವಾಕಥಾನ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ. ವಿಶೇಷವೆಂದರೆ ವಾಕಾಥಾನ್​ನಲ್ಲಿ ನಟ ಗಣೇಶ್ (Actor Ganesh) ಕೂಡ ಭಾಗಿಯಾಗಿದ್ದರು. ನೋ ಡ್ರಗ್ಸ್ ಎಂದು ಹೇಳುವ ಮೂಲಕ ನಟ ಗಣೇಶ್ ಪೊಲೀಸರಿಗೆ ಸಾಥ್ ಕೊಟ್ಟಿದ್ದಾರೆ.

ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರಿಂದ ಡ್ರಗ್ಸ್ ವಿರುದ್ದ ಜಾಗೃತಿ; ನೋ ಡ್ರಗ್ಸ್ ಎಂದ ನಟ ಗಣೇಶ್
| Updated By: ಆಯೇಷಾ ಬಾನು

Updated on: Jan 08, 2024 | 10:26 AM

ಬೆಂಗಳೂರು, ಜ.08: ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಡ್ರಗ್ಸ್ ವಿರುದ್ದ ಜಾಗೃತಿ (Drug awareness) ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾಗರಭಾವಿ ಸರ್ಕಲ್ ನಿಂದ ಜ್ಞಾನಭಾರತಿ ಪೊಲೀಸ್ ಠಾಣೆವರೆಗೂ ವಾಕಥಾನ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ. ವಿಶೇಷವೆಂದರೆ ವಾಕಾಥಾನ್​ನಲ್ಲಿ ನಟ ಗಣೇಶ್ (Actor Ganesh) ಕೂಡ ಭಾಗಿಯಾಗಿದ್ದರು. ನೋ ಡ್ರಗ್ಸ್ ಎಂದು ಹೇಳುವ ಮೂಲಕ ನಟ ಗಣೇಶ್ ಪೊಲೀಸರಿಗೆ ಸಾಥ್ ಕೊಟ್ಟಿದ್ದಾರೆ. ವಾಕಾಥಾನ್​ನಲ್ಲಿ ನೂರಾರು ಎನ್​ಎಸ್​ಎಸ್ ಹಾಗೂ ಎನ್​ಸಿಸಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್, ಎಸಿಪಿಗಳಾದ ಚಂದನ್, ಭರತ್ ರೆಡ್ಡಿ ಹಾಗೂ ಪಶ್ಚಿಮ ವಿಭಾಗದ ಇನ್ಸ್ ಪೆಕ್ಟರ್ ಗಳು ಭಾಗಿಯಾಗಿದ್ದರು.

Drug awareness program by bengaluru police actor ganesh joints hand

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us