ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ ಮಿಸ್​​

Edited By:

Updated on: Jan 01, 2026 | 6:07 PM

ಬೆಂಗಳೂರಿನ ಸಹಕಾರ ನಗರದಲ್ಲಿರುವ ಮಾಲ್ ಆಫ್​​ ಏಷ್ಯಾದ ಗೇಟ್ ನಂ.3ರಲ್ಲಿ ನಿನ್ನೆ ರಾತ್ರಿ ಕಾರೊಂದು ಫುಟ್​​ಪಾತ್​​ಗೆ ನುಗ್ಗಿದ ಪರಿಣಾಮ 7 ಮಂದಿ ಗಾಯಗೊಂಡಿದ್ದಾರೆ. ಚಾಲಕ ಮದ್ಯದ ನಶೆಯಲ್ಲಿದ್ದ ಎನ್ನಲಾಗಿದ್ದು, ಅಪಘಾತ ವೇಳೆ ಬಾಲಕಿಯೋರ್ವಳು ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದಾಳೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದೇವನಹಳ್ಳಿ, ಜನವರಿ 01: ಹೊಸ ವರ್ಷದ ಹಿನ್ನಲೆ ಕಂಠ ಪೂರ್ತಿ ಕುಡಿದ ಕಾರು ಚಾಲಕನೊಬ್ಬ ಮದ್ಯದ ಅಮಲಿನಲ್ಲಿ ಪಾದಚಾರಿಗಳ ಮೇಲೆ ಕಾರು ಹರಿಸಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮಾಲ್ ಆಫ್​​ ಏಷ್ಯಾದ ಗೇಟ್ ನಂ.3ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ವೇಳೆ ಅದೃಷ್ಟವಶಾತ್​​ ಕೂದಲೆಳೆ ಅಂತರದಲ್ಲಿ ಬಾಲಕಿ ಬಚಾವ್​​ ಆಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಚಾಲಕ ಮದ್ಯದಮಲಿನಲ್ಲಿದ್ದ ಹಿನ್ನೆಲೆ ಮಾಲ್​ನಿಂದ ಹೊರಗೆ ಬರುವಾಗ ಕಾರು ನಿಯಂತ್ರಣ ತಪ್ಪಿದೆ. ಹೀಗಾಗಿ ಫುಟ್‌ಪಾತ್​​ಗೆ ಕಾರು ನುಗ್ಗಿದ ಪರಿಣಾಮ 7 ಜನರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಕಾರು‌ ಚಾಲಕ ಸುನೀಲ್ ಕುಮಾರ್ ಸಿಂಗ್ ಮತ್ತು ಮಾಲ್ ಆಫ್​​ ಏಷ್ಯಾ ಆಡಳಿತ ಮಂಡಳಿ ವಿರುದ್ಧ ಸಂಜಯ್​​ನಗರ ಸಂಚಾರಿ ಠಾಣೆ ಪೊಲೀಸರು ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More