Kalaburagi: ಬರಿದಾಗಿರುವ ಭೀಮೆಯ ಒಡಲು, ಇನ್ನೊಂದು ವಾರ ಮಳೆಯಾಗದಿದ್ದರೆ ಕುಡಿಯುವ ನೀರಿಗೂ ಎದುರಾಗಲಿದೆ ಹಾಹಾಕಾರ
ಉತ್ತರ ಭಾಗದ ಜೀವನಾಡಿಯಾಗಿರುವ ಭೀಮೆಯ ಒಡಲು ಬರಿದಾಗಿದೆ. ಬ್ರಿಜ್ ಕಮ್ ಬ್ಯಾರೇಜ್ ಇರುವ ಕಡೆಗಳಲ್ಲಿ ಮಾತ್ರ ಅಲ್ಪ ಸ್ವಲ್ಪ ನೀರಿದೆ
ಕಲಬುರಗಿ: ರಾಜ್ಯದಲ್ಲಿ ನಾನಾಭಾಗಗಳಲ್ಲಿ ಮಳೆಯಾಗುತ್ತಿರುವುದು ನಿಜವಾದರೂ ಉತ್ತರ ಭಾಗದಲ್ಲಿ ಹರಿಯುವ ನದಿಗಳನ್ನು (rivers) ನೋಡಿದರೆ ವಾಸ್ತವಾಂಶ ಭಿನ್ನವಾಗಿರುವುದು ನಿಚ್ಚಳವಾಗುತ್ತದೆ. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಮೂಲಕ ಹರಿಯುವ ಭೀಮಾ ನದಿಯ (Bhima River) ಸ್ಥಿತಿ ನೋಡಿ ಹೇಗಿದೆ. ಮಾನ್ಸೂನ್ ಋತು (monsoon season) ಶುರುವಾಗಿ ಒಂದು ತಿಂಗಳು ಕಳೆದರೂ ಕಲ್ಯಾಣ ಕರ್ನಾಟಕದಲ್ಲಿ ಮಳೆಯಾಗುತ್ತಿಲ್ಲ. ಈ ಭಾಗದ ಜೀವನಾಡಿಯಾಗಿರುವ ಭೀಮೆಯ ಒಡಲು ಬರಿದಾಗಿದೆ. ಬ್ರಿಜ್ ಕಮ್ ಬ್ಯಾರೇಜ್ ಇರುವ ಕಡೆಗಳಲ್ಲಿ ಮಾತ್ರ ಅಲ್ಪ ಸ್ವಲ್ಪ ನೀರಿದೆ. ಇನ್ನೊಂದು ವಾರದಲ್ಲಿ ಉತ್ತಮ ಮಳೆಯಾಗದಿದ್ದರೆ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಟಿವಿ ಕನ್ನಡ ವಾಹಿನಿ ಕಲಬುರಗಿ ವರದಿಗಾರ ಸ್ಥಿತಿಯ ಕುರಿತು ಒಂದು ಪ್ರತ್ಯಕ್ಷ ವರದಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
