Duleep Trophy 2024: ಅಮೋಘ ಶತಕ ಸಿಡಿಸಿದ ರೋಹಿತ್ ನೆಚ್ಚಿನ ಆಟಗಾರ

Duleep Trophy 2024: ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿ 2024 ರ ಎರಡನೇ ಸುತ್ತಿನ ಪಂದ್ಯದಲ್ಲಿ ಭಾರತ ಎ ತಂಡವನ್ನು ಪ್ರತಿನಿಧಿಸುತ್ತಿರುವ ತಿಲಕ್ ವರ್ಮಾ ಅಮೋಘ ಶತಕ ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಭವಿಷ್ಯದ ನಾಯಕ ಎಂದು ಪರಿಗಣಿಸಲ್ಪಟ್ಟ ತಿಲಕ್ ವರ್ಮಾ ಅವರು ಭಾರತ ಡಿ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಶತಕ ಬಾರಿಸಿದರು.

Duleep Trophy 2024: ಅಮೋಘ ಶತಕ ಸಿಡಿಸಿದ ರೋಹಿತ್ ನೆಚ್ಚಿನ ಆಟಗಾರ
|

Updated on: Sep 14, 2024 | 6:46 PM

ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿ 2024 ರ ಎರಡನೇ ಸುತ್ತಿನ ಪಂದ್ಯದಲ್ಲಿ ಭಾರತ ಎ ತಂಡವನ್ನು ಪ್ರತಿನಿಧಿಸುತ್ತಿರುವ ತಿಲಕ್ ವರ್ಮಾ ಅಮೋಘ ಶತಕ ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಭವಿಷ್ಯದ ನಾಯಕ ಎಂದು ಪರಿಗಣಿಸಲ್ಪಟ್ಟ ತಿಲಕ್ ವರ್ಮಾ ಅವರು ಭಾರತ ಡಿ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಶತಕ ಬಾರಿಸಿದರು. ಈ ಮೂಲಕ ಪಂದ್ಯದ ಮೂರನೇ ದಿನ ಭಾರತ ಎ ತಂಡ, ಭಾರತ ಡಿ ವಿರುದ್ಧ 500 ರನ್‌ಗಳ ಮುನ್ನಡೆ ಸಾಧಿಸಿದೆ.

177 ಎಸೆತಗಳಲ್ಲಿ ಶತಕ

ಎರಡನೇ ದಿನ ಅಂದರೆ ಸೆಪ್ಟೆಂಬರ್ 13 ರ ಸಂಜೆ, ಮಯಾಂಕ್ ಅಗರ್ವಾಲ್ ಔಟಾದ ನಂತರ, ತಿಲಕ್ ವರ್ಮಾ ಕ್ರೀಸ್‌ನಲ್ಲಿ ಬ್ಯಾಟಿಂಗ್‌ಗೆ ಬಂದರು. ದಿನದಾಟದ ಅಂತ್ಯದ ನಂತರ ಅವರು ಅಜೇಯರಾಗಿ ಮರಳಿದರು. ಮೂರನೇ ದಿನ 177 ಎಸೆತಗಳಲ್ಲಿ ಶತಕ ಪೂರೈಸಿದ ತಿಲಕ್ ಅವರ ಶತಕದ ಇನ್ನಿಂಗ್ಸ್‌ನಲ್ಲಿ ಒಂಬತ್ತು ಬೌಂಡರಿಗಳೂ ಸೇರಿದ್ದವು. 2020-21ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದ ತಿಲಕ್ ವರ್ಮಾ, ಭಾರತ ತಂಡದ ಪರ ಇದುವರೆಗೆ ನಾಲ್ಕು ಏಕದಿನ ಮತ್ತು 16 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

ಇದೀಗ ಬಹಳ ದಿನಗಳ ನಂತರ ಕ್ರಿಕೆಟ್​ ಅಂಗಳಕ್ಕೆ ಕಾಲಿಟ್ಟಿರುವ ತಿಲಕ್ ವರ್ಮಾ ಅವರು ಕೊನೆಯ ಬಾರಿಗೆ ಐಪಿಎಲ್ 2024 ರಲ್ಲಿ ಕಾಣಿಸಿಕೊಂಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಈ ಎಡಗೈ ಬ್ಯಾಟ್ಸ್‌ಮನ್ 33 ಎಸೆತಗಳಲ್ಲಿ 10 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ತಿಲಕ್‌ಗಿಂತ ಮೊದಲು, ಅದೇ ಇನ್ನಿಂಗ್ಸ್‌ನಲ್ಲಿ ಭಾರತ ಎ ಪರ ಪ್ರಥಮ್ ಸಿಂಗ್ ಕೂಡ ಶತಕ ಗಳಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ