ಕರ್ನಾಟಕದಲ್ಲಿ ಮಾತ್ರವಲ್ಲ ಮುಂಬೈ, ಹೈದರಾಬಾದ್ನಲ್ಲೂ ‘ಭೀಮ’ ಚಿತ್ರಕ್ಕೆ ಬೇಡಿಕೆ
ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿದ್ದ ‘ಭೀಮ’ ಸಿನಿಮಾ ಮೊದಲ ದಿನ ಯಶಸ್ವಿ ಪ್ರದರ್ಶನ ಕಂಡಿದೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಪ್ರಯತ್ನ ಈ ಸಿನಿಮಾದಿಂದ ಆಗಿದೆ. ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡಿದೆ.
‘ಭೀಮ’ ಸಿನಿಮಾ ಕರ್ನಾಟಕದಲ್ಲಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಸಕ್ಸಸ್ ಮೀಟ್ ಆಗಸ್ಟ್ 13ರಂದು ನಡೆದಿದೆ. ಈ ವೇಳೆ ಇಡೀ ತಂಡ ಅಲ್ಲಿ ಹಾಜರಿ ಹಾಕಿತ್ತು. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ ‘ಭೀಮ’ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆ. ಈ ಬಗ್ಗೆ ನಟ, ನಿರ್ದೇಶಕ ದುನಿಯಾ ವಿಜಯ್ ಮಾತನಾಡಿದ್ದಾರೆ. ‘ನಮ್ಮ ಸಿನಿಮಾ ಕರ್ನಾಕಟದಲ್ಲಿ ಮಾತ್ರವಲ್ಲ ಮುಂಬೈ ಹಾಗೂ ಹೈದರಾಬದ್ನಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಲ್ಲಿಯೂ ಜನರು ಸಿನಿಮಾನ ನೋಡುತ್ತಿದ್ದಾರೆ’ ಎಂದಿದ್ದಾರೆ ದುನಿಯಾ ವಿಜಯ್. ಈ ಚಿತ್ರವನ್ನು ಕೆಆರ್ಜಿ ಸ್ಟುಡಿಯೋಸ್ ಹಂಚಿಕೆ ಮಾಡಿದೆ. ಅವರಿಗೆ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಕಾರು ಡಿಕ್ಕಿ ರಭಸಕ್ಕೆ ಬೈಕ್ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು

ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ

ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್

ಆರ್ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
