‘ಭೀಮ’ ಸಿನಿಮಾ ಕರ್ನಾಟಕದಲ್ಲಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಸಕ್ಸಸ್ ಮೀಟ್ ಆಗಸ್ಟ್ 13ರಂದು ನಡೆದಿದೆ. ಈ ವೇಳೆ ಇಡೀ ತಂಡ ಅಲ್ಲಿ ಹಾಜರಿ ಹಾಕಿತ್ತು. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ ‘ಭೀಮ’ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆ. ಈ ಬಗ್ಗೆ ನಟ, ನಿರ್ದೇಶಕ ದುನಿಯಾ ವಿಜಯ್ ಮಾತನಾಡಿದ್ದಾರೆ. ‘ನಮ್ಮ ಸಿನಿಮಾ ಕರ್ನಾಕಟದಲ್ಲಿ ಮಾತ್ರವಲ್ಲ ಮುಂಬೈ ಹಾಗೂ ಹೈದರಾಬದ್ನಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಲ್ಲಿಯೂ ಜನರು ಸಿನಿಮಾನ ನೋಡುತ್ತಿದ್ದಾರೆ’ ಎಂದಿದ್ದಾರೆ ದುನಿಯಾ ವಿಜಯ್. ಈ ಚಿತ್ರವನ್ನು ಕೆಆರ್ಜಿ ಸ್ಟುಡಿಯೋಸ್ ಹಂಚಿಕೆ ಮಾಡಿದೆ. ಅವರಿಗೆ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.