ಕರ್ನಾಟಕದಲ್ಲಿ ಮಾತ್ರವಲ್ಲ ಮುಂಬೈ, ಹೈದರಾಬಾದ್​ನಲ್ಲೂ ‘ಭೀಮ’ ಚಿತ್ರಕ್ಕೆ ಬೇಡಿಕೆ

Updated on: Aug 14, 2024 | 8:14 AM

ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿದ್ದ ‘ಭೀಮ’ ಸಿನಿಮಾ ಮೊದಲ ದಿನ ಯಶಸ್ವಿ ಪ್ರದರ್ಶನ ಕಂಡಿದೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಪ್ರಯತ್ನ ಈ ಸಿನಿಮಾದಿಂದ ಆಗಿದೆ. ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡಿದೆ.

‘ಭೀಮ’ ಸಿನಿಮಾ ಕರ್ನಾಟಕದಲ್ಲಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಸಕ್ಸಸ್ ಮೀಟ್ ಆಗಸ್ಟ್ 13ರಂದು ನಡೆದಿದೆ. ಈ ವೇಳೆ ಇಡೀ ತಂಡ ಅಲ್ಲಿ ಹಾಜರಿ ಹಾಕಿತ್ತು. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ ‘ಭೀಮ’ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆ. ಈ ಬಗ್ಗೆ ನಟ, ನಿರ್ದೇಶಕ ದುನಿಯಾ ವಿಜಯ್ ಮಾತನಾಡಿದ್ದಾರೆ. ‘ನಮ್ಮ ಸಿನಿಮಾ ಕರ್ನಾಕಟದಲ್ಲಿ ಮಾತ್ರವಲ್ಲ ಮುಂಬೈ ಹಾಗೂ ಹೈದರಾಬದ್​ನಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಲ್ಲಿಯೂ ಜನರು ಸಿನಿಮಾನ ನೋಡುತ್ತಿದ್ದಾರೆ’ ಎಂದಿದ್ದಾರೆ ದುನಿಯಾ ವಿಜಯ್. ಈ ಚಿತ್ರವನ್ನು ಕೆಆರ್​ಜಿ ಸ್ಟುಡಿಯೋಸ್ ಹಂಚಿಕೆ ಮಾಡಿದೆ. ಅವರಿಗೆ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More