ದರ್ಶನ್ ಹೆಸರು ಹೇಳುತ್ತಿದ್ದಂತೆ ಹೇಗಿತ್ತು ನೋಡಿ ದುನಿಯಾ ವಿಜಯ್ ಪ್ರತಿಕ್ರಿಯೆ

|

Updated on: Aug 16, 2024 | 8:11 AM

ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರನ್ನು ಜೈಲಿನಲ್ಲಿ ಇಡಲಾಗಿದೆ. ಈ ಪ್ರಕರಣದ ಬಳಿಕ ಅನೇಕರು ದರ್ಶನ್ ಪರವಾಗಿ ಮಾತನಾಡಿದರೆ ಇನ್ನೂ ಕೆಲವರು ದರ್ಶನ್ ಅವರ ಕೆಲಸವನ್ನು ವಿರೋಧಿಸಿದ್ದಾರೆ. ಈಗ ದುನಿಯಾ ವಿಜಯ್​ ಅವರು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ದುನಿಯಾ ವಿಜಯ್ ಅವರು ಸದ್ಯ ‘ಭೀಮ’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಒಳ್ಳೆಯ ಗಳಿಕೆ ಮಾಡಿ ಸಾಗುತ್ತಿದೆ. ಈ ಚಿತ್ರದಿಂದ ವಿಜಯ್ ಅವರಿಗೆ ನಿರ್ದೇಶನ ಹಾಗೂ ನಟನೆಯಲ್ಲಿ ಮತ್ತೊಂದು ಗೆಲುವು ಸಿಕ್ಕಿದೆ. ಈ ಗೆಲುವಿನ ಖುಷಿಯಲ್ಲಿ ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ಹೀರೋಗಳ ಹೆಸರು ಹೇಳಿ ಅವರ ಬಗ್ಗೆ ಏನು ಅನಿಸುತ್ತದೆ ಎಂದು ಕೇಳಲಾಯಿತು. ಪುನೀತ್ ರಾಜ್​ಕುಮಾರ್ ಬಗ್ಗೆ ಕೇಳಲಾಯಿತು. ‘ಕುಟುಂಬದವರನ್ನೇ ಯಾರನ್ನೋ ಕಳೆದುಕೊಂಡಿದ್ದೇನೆ ಎಂಬ ಭಾವನೆ’ ಎಂದರು ದುನಿಯಾ ವಿಜಯ್. ದರ್ಶನ್ ಹೆಸರು ಹೇಳುತ್ತಿದ್ದಂತೆ ‘ಒಳ್ಳೆಯದಾಗಲಿ’ ಎಂದಷ್ಟೇ ಹೇಳಿ ಮಾತನ್ನು ಮುಗಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on