ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ದುನಿಯಾ ವಿಜಯ್ ‘ಭೀಮ’ ಸಿನಿಮಾ ಮೂಲಕ ಹಿಟ್ ಸಿನಿಮಾ ಕೊಟ್ಟಿದ್ದಾರೆ. ಇದೀಗ ಇತರೆ ನಟರುಗಳ ಸಿನಿಮಾಗಳಿಗೆ ಬೆಂಬಲ ನೀಡುತ್ತಿದ್ದಾರೆ. ಮಯೂರ್ ಪಟೇಲ್ ಕಮ್ಬ್ಯಾಕ್ ಸಿನಿಮಾಕ್ಕೆ ಬೆಂಬಲ ನೀಡಿದ ದುನಿಯಾ ವಿಜಿ, ಮಯೂರ್ ಅವರ ವಿನಯತೆಯನ್ನು ಕೊಂಡಾಡಿದರು.
ದುನಿಯಾ ವಿಜಯ್ ಇತ್ತೀಚೆಗೆ ‘ಭೀಮ’ ಸಿನಿಮಾ ಮೂಲಕ ಹಿಟ್ ಸಿನಿಮಾ ನೀಡಿದ್ದಾರೆ. ‘ಭೀಮ’ ಯಶಸ್ಸಿನ ಬಳಿಕ ತುಸು ಬಿಡುವಾಗಿರುವ ನಟ, ನಿರ್ದೇಶಕ ದುನಿಯಾ ವಿಜಿ, ಇತರರ ಸಿನಿಮಾಗಳಿಗೆ ಬೆಂಬಲ ನೀಡುವ ಕಾರ್ಯ ಮಾಡುತ್ತಿದ್ದಾರೆ. ಕೆಲ ದಿನದ ಹಿಂದೆ ದಿಗಂತ್ ನಟನೆಯ ‘ಪೌಡರ್’ ಸಿನಿಮಾದ ಪ್ರೀ ರಿಲೀಸ್ನಲ್ಲಿ ಭಾಗಿಯಾಗಿ ಶುಭ ಕೋರಿದ್ದರು. ಇದೀಗ ಮಯೂರ್ ಪಟೇಲ್ರ ಹೊಸ ಸಿನಿಮಾಕ್ಕೆ ಶುಭ ಕೋರಿದ್ದು ಮಾತ್ರವಲ್ಲದೆ ಮಯೂರ್ ಅವರನ್ನು ಬಹುವಾಗಿ ಕೊಂಡಾಡಿದರು. ಮಯೂರ್ ಪಟೇಲ್ ವಿನಯವಂತ ವ್ಯಕ್ತಿ, ಅವರು ಮೊದಲು ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ. ಆಗಲೂ ಸಹ ಬಹಳ ವಿನಯದಿಂದ ನಡೆದುಕೊಳ್ಳುತ್ತಿದ್ದರು. ಅದೇ ವಿನಯತೆ, ಮಾನವೀಯತೆ ಉಳಿಸಿಕೊಂಡಿದ್ದಾರೆ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

