Karnataka Assembly Polls 2023; ಬಜರಂಗದಳ ರಾಷ್ಟ್ರಮಟ್ಟದಲ್ಲಿ ಹಿಂದೂಗಳ ಹಿತಾಸಕ್ತಿ ಕಾಯುವ ಒಂದು ಸಂಘಟನೆಯಾಗಿದೆ: ಬಿವೈ ವಿಜಯೇಂದ್ರ

Updated on: May 05, 2023 | 6:36 PM

ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ 30 ಜನ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು ಎಂದು ವಿಜಯೇಂದ್ರ ಹೇಳಿದರು.

ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೂ ಮಾತಾಡಿದರು. ಕಾಂಗ್ರೆಸ್ ಪಕ್ಷ ನಾಯಕರ ಮೇಲೆ ನೇರ ಪ್ರಹಾರ ನಡೆಸಿದ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡುತ್ತಿರುವ ಆ ಪಕ್ಷದ ನಾಯಕರು ಬಜರಂಗ ದಳವನ್ನು (Bajrang Dal) ನಿಷೇಧಿಸುವುದಾಗಿ ಹೇಳುತ್ತಿದ್ದಾರೆ. ಹಾಗಾದರೆ ಪಿಎಫ್ ಐ ಮತ್ತು ಬಜರಂಗದಳದ ನಡುವೆ ಏನೂ ವ್ಯತ್ಯಾಸವಿಲ್ಲವೇ? ಎಂದು ಅವರು ಪ್ರಶ್ನಿಸಿದರು. ಬಜರಂಗ ದಳ ರಾಷ್ಟ್ರಮಟ್ಟದಲ್ಲಿ ಹಿಂದೂಗಳ ಹಿತಾಸಕ್ತಿಯನ್ನು ಕಾಯುವ ಸಂಘಟನೆಯಾಗಿದೆ, ಒಂದು ಶಕ್ತಿಯಾಗಿದೆ ಎಂದು ಹೇಳಿದ ವಿಜಯೇಂದ್ರ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ 30 ಜನ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More