ಡಿವಿ ಸದಾನಂದಗೌಡ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದು ಹೈಕಮಾಂಡ್ ಸೂಚನೆ ಕಾರಣ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Nov 09, 2023 | 12:38 PM

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂತ ನೇರವಾಗಿ ವರಿಷ್ಠರು ಸದಾನಂದ ಗೌಡರಿಗೆ ಹೇಳಿದ್ದಾರೆ; ಆದರೆ ಪಕ್ಷದ ಬೇರೆಲ್ಲ ಚಟುವಟಿಕೆಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮಳೆಯಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ವೀಕ್ಷಣೆಗೆ ತೆರಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ನಿನ್ನೆ ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿವಿ ಸದಾನಂದ ಗೌಡ (DV Sadananda Gowda) ಅವರು ಹೈಕಮಾಂಡ್ (high command) ಸೂಚನೆ ಮೇರೆಗೆ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಹೇಳಿದರು. 2024 ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಸಿಗಲಾರದೆನ್ನುವ ಕಾರಣಕ್ಕೆ ಅವರು ಚುನಾವಣಾ ರಾಜಕೀಯದಿಂದ ದೂರ ಸರಿಯವ ನಿರ್ಧಾರ ಮಾಡಿದರೇ ಅಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂತ ನೇರವಾಗಿ ವರಿಷ್ಠರು ಅವರಿಗೆ ಹೇಳಿದ್ದಾರೆ; ಆದರೆ ಪಕ್ಷದ ಬೇರೆಲ್ಲ ಚಟುವಟಿಕೆಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.