DK Shivakumar: ಒಡಿಶಾ ರೈಲು ದುರಂತದಲ್ಲಿ ಮಡಿದ ಮತ್ತು ಗಾಯಗೊಂಡವರಿಗೆ ಕಂಬನಿ ಮಿಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಮುಂದೆ ಇಂಥ ದುರಂತಗಳು ಜರುಗದಂತೆ ಮುನ್ನೆಚ್ಚರವಹಿಸಲು ಜರುಗಿದ ಪ್ರಮಾದವೇನು ಅನ್ನೋದು ತನಿಖೆ ಮಾಡಬೇಕಾಗುತ್ತದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಒಡಿಶಾದ ಬಹನಾಗ ಬಳಿ ಕಳೆದ ರಾತ್ರಿ ಸಂಭವಿಸಿದ ಭಯಾನಕ ರೈಲು ಅಪಘಾತದಲ್ಲಿ (Odisha Train Accident) ಮಡಿದವರ ಮತ್ತು ಗಾಯಗೊಂಡವರಿಗೆ ಕರ್ನಾಟಕದ ಪರವಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಅಷ್ಟು ದೊಡ್ಡ ಪ್ರಮಾಣದ ದುರಂತ ಸಂಭವಿಸಿದಾಗ ಕಾರಣಗಳನ್ನು ಕೆದಕುತ್ತ ಕೂರುವುದು ಸರಿಯಲ್ಲ. ಆದರೆ ಮುಂದೆ ಇಂಥ ದುರಂತಗಳು ಜರುಗದಂತೆ ಮುನ್ನೆಚ್ಚರವಹಿಸಲು ಜರುಗಿದ ಪ್ರಮಾದವೇನು ಅನ್ನೋದು ತನಿಖೆ ಮಾಡಬೇಕಾಗುತ್ತದೆ ಎಂದು ಶಿವಕುಮಾರ್ ಹೇಳಿದರು. ಮುಂದುವರಿದು ಮಾತಾಡಿದ ಉಪ ಮುಖ್ಯಮಂತ್ರಿ, ಇವತ್ತಿನ ದಿನವನ್ನು ವಿಧಾನ ಸಭಾ ಚುನಾವಣೆಯಲ್ಲಿ (assembly polls) ತಮ್ಮನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿದ ಕನಕಪುರದ ಜನತೆಗೆ ಮೀಸಲಿಟ್ಟಿದ್ದು ಅವರನ್ನು ಭೇಟಿಯಾಗಲು ಹೋಗುತ್ತಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 3 June 23

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us