DK Shivakumar: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದ ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಇಂದು ಬೆಳಗ್ಗೆ ಅವರು ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮನೆಗೆ ತೆರಳಿ ಹಿರಿಯ ನಾಯಕರನ್ನು ಗೌರವಿಸಿದ್ದರು.
ಬೆಂಗಳೂರು: ಇದು ನಿಜಕ್ಕೂ ಒಳ್ಳೆಯ ಸಂಸ್ಕಾರ. ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ರಾಜ್ಯದ ಹಿಂದಿನ ಮುಖ್ಯಮಂತ್ರಿಗಳ ನಿವಾಸಿಗಳಿಗೆ ತೆರಳಿ ಅವರಿಂದ ಆಶೀರ್ವಾದ ಪಡೆಯುತ್ತಿದ್ದಾರೆ. ಈ ವಿಡಿಯೋದಲ್ಲಿ ಅವರು ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಮ್ ವೀರಪ್ಪ ಮೊಯ್ಲಿ (M Veerappa Moily) ಅವರನ್ನು ಭೇಟಿಯಾಗಿ, ಹೂಗುಚ್ಛ ನೀಡಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ಇಂದು ಬೆಳಗ್ಗೆ ಅವರು ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ (SM Krishna) ಅವರ ಮನೆಗೆ ತೆರಳಿ ಹಿರಿಯ ನಾಯಕರನ್ನು ಗೌರವಿಸಿದ್ದರು. ಗಮನಿಸಬೇಕಾದ ಸಂಗತಿಯೆಂದರೆ ಇಲ್ಲೂ ಅವರೊಂದಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
