ಕುಮಾರಸ್ವಾಮಿ ಚರ್ಚೆಗೆ ಬರಲಿ: ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಸವಾಲು

Edited By:

Updated on: Sep 30, 2025 | 6:12 PM

ತಮ್ಮ ಬಗ್ಗೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಕಿಡಿ ಕಾರಿದ್ದಾರೆ. ಮೊದಲಿಂದಲೂ ನನ್ನನ್ನು ಜೈಲಿಗೆ ಹಾಕಲು ಸಂಕಲ್ಪ, ಷಡ್ಯಂತ್ರ ಮಾಡಿದ್ದಾರೆ. ಕುಮಾರಸ್ವಾಮಿ ಚರ್ಚೆಗೆ ಬರಲಿ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 30: ಡಿಸಿಎಂ ಡಿ.ಕೆ.ಶಿವಕುಮಾರ್​ (D.K. Shivakumar) ಜೈಲಿಗೆ ಹೋಗ್ತಾರೆಂಬ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ (H.D. Kumaraswamy) ಹೇಳಿಕಗೆ ಸ್ವತಃ ಉಪ ಮುಖ್ಯಮಂತ್ರಿಗಳೇ ತಿರುಗೇಟು ನೀಡಿದ್ದಾರೆ. ಮೊದಲಿಂದಲೂ ನನ್ನನ್ನು ಜೈಲಿಗೆ ಹಾಕಲು ಸಂಕಲ್ಪ, ಷಡ್ಯಂತ್ರ ಮಾಡಿದ್ದಾರೆ. ಕುಮಾರಸ್ವಾಮಿ ಏನೇನು ಮಾತನಾಡಿದ್ದಾರೆ ಎಲ್ಲದಕ್ಕೂ ಉತ್ತರ ಕೊಡ್ತೇನೆ. ಮೊದಲಿಂದಲೂ ನಮ್ಮ ವಿರುದ್ಧ ಅವರ ಕುಟುಂಬ ಷಡ್ಯಂತ್ರ ಮಾಡ್ತಿದೆ. HDK ಸಿಎಂ ಆಗಿದ್ದಾಗ ನನ್ನ ತಂಗಿ, ತಮ್ಮನ ಮೇಲೆ ಕೇಸ್ ಹಾಕಿಸಿದ್ದರು. ಇದು ಕೊನೆ ಆಗಬೇಕಿದ್ದು, ಯಾವುದಾದರೂ ಮಾಧ್ಯಮದಲ್ಲಿ ಕುಮಾರಸ್ವಾಮಿ ಚರ್ಚೆಗೆ ಬರಲಿ ಎಂದು ಡಿಕೆಶಿ ಸವಾಲು ಹಾಕಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Sep 30, 2025 06:12 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More