AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಕುತೂಹಲ ಮೂಡಿಸಿದ ಡಿಸಿಎಂ ಡಿಕೆಶಿ ಡೆಡ್​ಲೈನ್​

ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಕುತೂಹಲ ಮೂಡಿಸಿದ ಡಿಸಿಎಂ ಡಿಕೆಶಿ ಡೆಡ್​ಲೈನ್​

ಪ್ರಸನ್ನ ಗಾಂವ್ಕರ್​
| Edited By: |

Updated on:Oct 26, 2025 | 10:57 AM

Share

ರಾಜ್ಯದಲ್ಲಿ ನವೆಂಬರ್​ ಕ್ರಾಂತಿ ವಿಚಾರದ ನಡುವೆ ಸಚಿವರು, ಶಾಸಕರು, ಡಿಸಿಸಿ ಅಧ್ಯಕ್ಷರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಪತ್ರ ಬರೆದು ಡೆಡ್​ಲೈನ್​ ನೀಡಿರುವ ವಿಚಾರ ಭಾರಿ ಕುತೂಹಲ ಮೂಡಿಸಿದೆ. ವೆಂಬರ್ 20ಕ್ಕೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣ ಹಿನ್ನಲೆ ಅಂದೇ ಗಡುವು ನೀಡಿದ್ದಾರೆ ಎನ್ನಲಾಗಿದೆ. ಶಂಕುಸ್ಥಾಪ‌ನೆ ಕಾರ್ಯಕ್ರಮಕ್ಕೆ ಆಗಮಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಒಪ್ಪಿದ್ದು, ಗಡುವು ಮುಗಿಯುವುದರೊಳಗೆ ಎಲ್ಲಾ ಪ್ರಕ್ರಿಯೆ ಮುಗಿಸಿ ಎಂದು ಡಿಸಿಎಂ ಸೂಚಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​ 26: ರಾಜ್ಯದಲ್ಲಿ ನವೆಂಬರ್​ ಕ್ರಾಂತಿ ವಿಚಾರದ ನಡುವೆ ಸಚಿವರು, ಶಾಸಕರು, ಡಿಸಿಸಿ ಅಧ್ಯಕ್ಷರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​ (DK Shivakumar) ಪತ್ರ ಬರೆದು ಡೆಡ್​ಲೈನ್​ ನೀಡಿರುವ ವಿಚಾರ ಭಾರಿ ಕುತೂಹಲ ಮೂಡಿಸಿದೆ. ರಾಜ್ಯದ ಎಲ್ಲಾ ಡಿಸಿಸಿ/ಬಿಸಿಸಿಗಳು ಸ್ವಂತ ಕಚೇರಿ ಹೊಂದಲು ಡಿಕೆಶಿ ಸೂಚಿಸಿದ್ದು, ನವೆಂಬರ್ 20ರ ಡೆಡ್‌ಲೈನ್ ನೀಡಿ ಪತ್ರ ಬರೆದಿದ್ದಾರೆ. ನವೆಂಬರ್ 20ಕ್ಕೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣ ಹಿನ್ನಲೆ ಅಂದಿಗೇ ಗಡುವು ನೀಡಿದ್ದಾರೆ ಎನ್ನಲಾಗಿದೆ. ಶಂಕುಸ್ಥಾಪ‌ನೆ ಕಾರ್ಯಕ್ರಮಕ್ಕೆ ಆಗಮಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಒಪ್ಪಿದ್ದು, ಗಡುವು ಮುಗಿಯುವುದರೊಳಗೆ ಎಲ್ಲಾ ಪ್ರಕ್ರಿಯೆ ಮುಗಿಸಿ ಎಂದು ಡಿಸಿಎಂ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 26, 2025 10:56 AM
Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More