ಪೀಕ್​ ಅವರ್​ ವೇಳೆ ಕಾರಲ್ಲಿ ಹೋದ್ರೆ ದಂಡ!: ಡಿಸಿಎಂ ಡಿಕೆಶಿ ಹೇಳಿದ್ದೇನು?

Updated By: ಪ್ರಸನ್ನ ಹೆಗಡೆ

Updated on: Sep 30, 2025 | 5:14 PM

ಪೀಕ್​ ಅವರ್​ ವೇಳೆ ಕಾರಿನಲ್ಲಿ ಹೋಗುವವರಿಗೆ ಇನ್ನು ಮುಂದೆ ದಂಡ ವಿಧಿಸಲಾಗುತ್ತೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್​ ಸ್ಪಷ್ಟನೆ ಕೊಟ್ಟಿದ್ದು, ರಾಜ್ಯ ಸರ್ಕಾರ ಆ ರೀತಿಯ ಯಾವುದೇ ನಿರ್ಣಯ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 30: ಪೀಕ್​ ಅವರ್​ ವೇಳೆ ಕಾರಿನಲ್ಲಿ ಹೋಗುವವರಿಗೆ ದಂಡ ವಿಧಿಸಲಾಗುತ್ತೆ ಎಂಬ ಸುದ್ದಿ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)​ ಸ್ಪಷ್ಟನೆ ಕೊಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಇದೆಲ್ಲ ಸುಳ್ಳು ಸುದ್ದಿ. ರಾಜ್ಯ ಸರ್ಕಾರದ ಎದುರು ಆ ರೀತಿ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ದಂಡದ ವಿಚಾರವಾಗಿ ಕೇಳಿಬಂದಿದ್ದ ಊಹಾಪೋಹಗಳಿಗೆ ಡಿಸಿಎಂ ತೆರೆ ಎಳೆದಿದ್ದಾರೆ.

ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.