Loading video

ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 28, 2025 | 2:38 PM

ಮ್ಯಾನ್ಮಾರ್‌ನಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಎರಡನೇ ಕಂಪನವು 7.0 ತೀವ್ರತೆ ದಾಖಲಾಗಿದೆ. ಥೈಲ್ಯಾಂಡ್ ಮತ್ತು ವಿಯೆಟ್ನಾಂನಲ್ಲಿಯೂ ಕಂಪನ ಅನುಭವವಾಗಿದೆ. ಆದಾಗ್ಯೂ, ಭಾರತದ ಈಶಾನ್ಯ ರಾಜ್ಯಗಳಿಗೆ ಯಾವುದೇ ಹಾನಿ ಅಥವಾ ಪ್ರಾಣಹಾನಿಯ ವರದಿಯಾಗಿಲ್ಲ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿ ಆಗಿದೆ. 

ನವದೆಹಲಿ, ಮಾರ್ಚ್​ 28: ಇಂದು ಬೆಳಿಗ್ಗೆ 11:50 ರ ಸುಮಾರಿಗೆ ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪವಾಗಿದೆ (earthquake). ಮೊದಲ ಕಂಪನದ ತೀವ್ರತೆ 7.2ರಷ್ಟಿದ್ದರೆ, 2ನೇ ಸಲ ಕಂಪನದ ತೀವ್ರತೆ 7.0ರಷ್ಟು ದಾಖಲಾಗಿದೆ. ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲೂ ಭೂಕಂಪನ ಅನುಭವಕ್ಕೆ ಬಂದಿದೆ. ವಿಯೆಟ್ನಾಂ ಸೇರಿದಂತೆ ನೆರೆಯ ದೇಶಗಳಲ್ಲಿ ಕೂಡ ಭೂಕಂಪನದ ಅನುಭವವಾಗಿದೆ ಎನ್ನಲಾಗುತ್ತಿದೆ. ಆದರೆ ಭಾರತದ ಈಶಾನ್ಯ ರಾಜ್ಯಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 28, 2025 02:08 PM