ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ

Edited By:

Updated on: Apr 21, 2026 | 4:28 PM

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು....ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು, (ಏಪ್ರಿಲ್ 21): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics)  ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು (bitcoin Scam) ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ED) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು….ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಒದಿ: ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ

 

Follow Us