ಸತೀಶ್ ಜಾರಕಿಹೊಳಿ ಮನೆ ಮೇಲೆ ರೇಡ್​ ಬೆನ್ನಲ್ಲೇ ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್

Edited By:

Updated on: Sep 12, 2026 | 9:11 PM

ಇ.ಡಿ. ನಿರ್ದೇಶಕ ರಾಹುಲ್ ನವೀನ್ ಬೆಂಗಳೂರಿಗೆ ಆಗಮಿಸಿದ್ದು, ಹಲವು ಮಹತ್ವದ ಇ.ಡಿ. ದಾಳಿ ಪ್ರಕರಣಗಳನ್ನು ಪರಿಶೀಲಿಸುವ ಸಾಧ್ಯತೆಯಿದೆ. ಮುಖ್ಯವಾಗಿ, ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆದ ಇ.ಡಿ. ದಾಳಿ ಪ್ರಕರಣದ ತನಿಖೆಯ ಪ್ರಗತಿಯ ಕುರಿತು ಅವರು ಸಭೆ ನಡೆಸುವ ನಿರೀಕ್ಷೆಯಿದೆ.

ಬೆಂಗಳೂರು, ಸೆಪ್ಟೆಂಬರ್​ 12: ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಖುದ್ದು ಇ.ಡಿ ನಿರ್ದೇಶಕರೇ ಅಖಾಡಕ್ಕೆ ಇಳಿದಿದ್ದಾರೆ. ಇಡಿ ನಿರ್ದೇಶಕ ರಾಹುಲ್ ನವೀನ್ ಅವರು ನವದೆಹಲಿಯಿಂದ ಏರ್ ಇಂಡಿಯಾ ವಿಮಾನದ ಮೂಲಕ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನಾಳೆಯಿಂದ ಎರಡು ರಾಜ್ಯದ ಪ್ರಕರಣಗಳ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 12, 2026 09:08 PM
Loading...
Unable to load recommendations.
Follow Us