AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಇಲ್ಲವೇ ಡಿಸಿಎಂ ಹೆಸರು ಉಲ್ಲೇಖಿಸುವಂತೆ ಈಡಿ ಅಧಿಕಾರಿಗಳು ಒತ್ತಡ ಹೇರಿದ್ದರು: ಬಿ ನಾಗೇಂದ್ರ

ಸಿಎಂ ಇಲ್ಲವೇ ಡಿಸಿಎಂ ಹೆಸರು ಉಲ್ಲೇಖಿಸುವಂತೆ ಈಡಿ ಅಧಿಕಾರಿಗಳು ಒತ್ತಡ ಹೇರಿದ್ದರು: ಬಿ ನಾಗೇಂದ್ರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Oct 16, 2024 | 3:11 PM

Share

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸುಖಾಸುಮ್ಮನೆ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ ಮತ್ತು ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಇತರ ಕೆಲ ನಾಯಕರು ಶಾಮೀಲಾಗಿದ್ದಾರೆ, ಆದರೆ ಅವರೆಲ್ಲ ತಮ್ಮ ಪ್ರಯತ್ನಗಳಲ್ಲಿ ಯಾವತ್ತೂ ಸಫಲರಾಗಲ್ಲ ಎಂದು ನಾಗೇಂದ್ರ ಹೇಳಿದರು.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ಪ್ರಮುಖ ಅರೋಪಿಯಾಗಿ ಈಡಿ ಮುಖಾಂತರ ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರಗೆ ಜಾಮೀನು ಸಿಕ್ಕು ಹೊರಬಂದಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಈಡಿ ಅಧಿಕಾರಿಗಳು ಯಾರದ್ದೋ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ, ತನ್ನ ವಿಚಾಣೆ ನಡೆಸುವಾಗ ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಇಲ್ಲವೇ ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳುವಂತೆ ತನ್ನ ಮೇಲೆ ಒತ್ತಡ ಹೇರಿದ್ದರು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿ ನಾಗೇಂದ್ರ ಸಣ್ಣ ಮೀನು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ತಿಮಿಂಗಿಲು ಎಂದ ಶೋಭಾ ಕರಂದ್ಲಾಜೆ

Published on: Oct 16, 2024 03:10 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.