ಮೈಸೂರು, ಅಕ್ಟೋಬರ್ 19: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ದಾಳಿ, ದಾಖಲೆಗಳ ಪರಿಶೀಲನೆ ಮುಂದುವರಿದ ಕಾರಣ ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ. ಸದ್ಯ ಮುಡಾ ಅಧಿಕಾರಿಗಳು ಇಡಿ ತನಿಖೆಗೆ ಸಹಕರಿಸುತ್ತಿರುವ ಕಾರಣ ದೈನಂದಿನ ಕಾರ್ಯಚಟುವಟಿಕೆಗಳು ನಡೆಯುತ್ತಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಮಧ್ಯೆ, ಮೈಸೂರಿನ ಮುಡಾ ಕಚೇರಿಗೆ ಆಗಮಿಸಿದ ನಾಲ್ವರು ಇಡಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಇದೇ ವೇಳೆ, ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಕಚೇರಿಗೆ ಆಗಮಿಸಿದರು. ಯಾವುದೇ ಪ್ರತಿಕ್ರಿಯೆ ನೀಡದೆ ಕಚೇರಿಗೆ ತೆರಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ