ಈಡಿ ದಾಳಿ ಮಾಡಿದ್ದು ಮುಡಾ ಕಚೇರಿ ಮೇಲೆ, ಸಿಎಂ ಮನೆ ಮೇಲಲ್ಲ: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 19, 2024 | 7:09 PM

ಮುಡಾ ಹಗರಣ ಹಣದ ಅವ್ಯವಹಾರಕ್ಕೆ ಸಂಬಂಧಿಸಿದ ವಿಷಯವಲ್ಲದಿದ್ದರೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವ ಔಚಿತ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ಆದೇ ಸಂಗತಿಯನ್ನು ಎಲ್ಲರೂ ಕೇಳುತ್ತಿದ್ದಾರೆ ಮತ್ತು ಸುಪ್ರೀಂ ಕೋರ್ಟ್​​​​ಗೆ ಮನವಿ ಸಲ್ಲಿಸಿ ಈಡಿ ವ್ಯಾಪ್ತಿಯನ್ನು ಪ್ರಶ್ನಿಸಿದ್ದಾರೆ ಎಂದು ಹೇಳಿದರು.

ಬೆಳಗಾವಿ: ಮುಡಾ ಕಚೇರಿ ಮೇಲೆ ಈಡಿ ಅಧಿಕಾರಿಗಳು ಮಾಡಿರುವ ದಾಳಿ ಮತ್ತು ಸರ್ಕಾರದ ನಡುವೆ ಯಾವುದೇ ಸಂಬಂಧವಿಲ್ಲ, ಅವರು ಕಚೇರಿಯ ಮೇಲೆ ದಾಳಿ ಮಾಡಿದ್ದಾರೆಯೇ ಹೊರತು ಸಿದ್ದರಾಮಯ್ಯ ಮನೆ ಮೇಲೆ ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಾಧ್ಯಮಗಳ ಜೊತೆ ಮಾತಾಡಿದ ಸಚಿವ, ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಸುರೇಶ್ ಚಾಪರ್​​ನಲ್ಲಿ ಬಂದು ಮುಖ್ಯವಾದ ಕಡತಗಳನ್ನು ಹೊತ್ತೊಯ್ದಿದ್ದಾರೆ ಅಂತ ಕುಮಾರಸ್ವಾಮಿ ಮಾಡಿರೋದು ಆಪಾದನೆ, ಅದು ಪ್ರೂವ್ ಆಗಬೇಕಿದೆ ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಡಾ ಕಚೇರಿ ಮೇಲೆ ಈಡಿ ದಾಳಿ ನಡೆಸಿದ್ದು ನನಗೆ ಸಂಬಂಧಿಸದ ವಿಷಯ: ಭೈರತಿ ಸುರೇಶ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.