AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಭೇಷ್ ಅನಿಸಿಕೊಂಡಿದ್ದನ್ನು ಹೆಮ್ಮೆಯಿಂದ ಹೇಳಿಕೊಂಡ ಮಧು ಬಂಗಾರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಭೇಷ್ ಅನಿಸಿಕೊಂಡಿದ್ದನ್ನು ಹೆಮ್ಮೆಯಿಂದ ಹೇಳಿಕೊಂಡ ಮಧು ಬಂಗಾರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 14, 2025 | 1:19 PM

ಶಿಕ್ಷಣದ ಗುಣಮಟ್ಟ ಉತ್ತಮಗೊಳ್ಳುತ್ತಿರುವ ಬಗ್ಗೆಯೂ ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದರು. ಕಳೆದ ವರ್ಷ ಕೇವಲ ಇಬ್ಬರು ವಿದ್ಯಾರ್ಥಿಗಳು ಮಾತ್ರ 625/625 ಅಂಕಗಳನ್ನು ಪಡೆದಿದ್ದರು, ಆದರೆ ಈ ಬಾರಿ ರೀಇವಾಲ್ಯುಯೇಷನ್ ಮಾಡಿಸಿದ 4 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 51 ವಿದ್ಯಾರ್ಥಿಗಳು ಶತ ಪ್ರತಿಶತ ಅಂಕಗಳನ್ನು ಪಡೆದರು ಮತ್ತು ಇವರಲ್ಲಿ ಒಬ್ಬರು ಸರ್ಕಾರೀ ಶಾಲೆಯ ವಿದ್ಯಾರ್ಥಿ ಅಂತ ಹೇಳಿಕೊಳ್ಳಲು ಹೆಮ್ಮೆಯೆನಿಸುತ್ತದೆ ಎಂದು ಸಚಿವ ಹೇಳಿದರು.

ಶಿವಮೊಗ್ಗ, ಜೂನ್ 14: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಹಳ ಖುಷಿಯಲ್ಲಿದ್ದಾರೆ ಮತ್ತು ಅದಕ್ಕೆ ಕಾರಣಗಳೂ ಇವೆ. ಅವರು ಸಚಿವನಾಗಿ ಅಧಿಕಾರವಹಿಸಿಕೊಂಡು ಎರಡು ವರ್ಷಗಳಾಗಿವೆ ಮತ್ತು ಈ ಅವಧಿಯಲ್ಲಿ ಅವರಿಗೆ ಮಾಡಿರುವ ಕೆಲಸದ ಬಗ್ಗೆ ತೃಪ್ತಿಯಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ತನ್ನ ಕಾರ್ಯವೈಖರಿಯನ್ನು ಕಂಡು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ (CM Siddaramaiah) ಶಹಬ್ಬಾಸ್​ಗಿರಿ ನೀಡಿದ್ದನ್ನು ಸಂತೋಷದಿಂದ ಹೇಳಿಕೊಂಡರು. ದೇಶದಲ್ಲೇ ಮೊದಲ ಬಾರಿಗೆ ತಂದಿರುವ ಮೂರು ಪರೀಕ್ಷೆ ನೀತಿಯಿಂದ ಸಾವಿರಾರು ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತಿದೆ, ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗದವರು ಎರಡನೇ ಮತ್ತು ಮೂರನೇ ಪ್ರಯತ್ನದಲ್ಲಿ ಪರೀಕ್ಷೆ ಬರೆದು ಪಾಸಾಗಿ ಅವರ ಶೈಕ್ಷಣಿಕ ವರ್ಷ ಹಾಳಾಗದ ಅವಕಾಶವನ್ನು ಹೊಸ ನೀತಿ ಕಲ್ಪಿಸುತ್ತದೆ ಎಂದು ಮಧು ಹೇಳಿದರು.

ಇದನ್ನೂ ಓದಿ:  SSLC ವಿದ್ಯಾರ್ಥಿಗಳಿಗೆ ಬಿಗ್​ ಅಪ್ಡೇಟ್ ನೀಡಿದ ಮಧು ಬಂಗಾರಪ್ಪ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ