ಚೆನ್ನೈ ಮನೆಗೆ ಹೊಯ್ತು, ಈ ಸಲ ಕಪ್ ನಮ್ದೆ: ಗ್ರಾಮದಲ್ಲಿ ಡಂಗೂರ ಸಾರಿದ ಅಭಿಮಾನಿ

Updated on: May 19, 2024 | 1:07 PM

ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಚೆನ್ನೈ ವಿರುದ್ಧ ಗೆಲುವು ಸಾಧಿಸಿ ಐಪಿಎಲ್​ 2024ರ ಪ್ಲೇ ಆಫ್​ಗೆ ಪ್ರವೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ಆರ್​ಸಿಬಿಯ ಹೊಸ ಅಧ್ಯಾಯ ಶುರುವಾಗಿದ್ದು, ಆರ್​ಸಿಬಿಯ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನು ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿರುವ ಖುಷಿಯಲ್ಲಿ ಅಭಿಮಾನಿಯೋರ್ವ ಗ್ರಾಮದಲ್ಲಿ ಡಂಗೂರ ಸಾರಿ ಈ ಸಲ ಕಪ್​ ನಮ್ದೆ ಎಂದು ಸ್ಪೇಷಲ್ ಸೆಲೆಬ್ರೆಷನ್ ಮಾಡಿದ್ದಾನೆ. ಆ ವಿಡಿಯೋ ಇಲ್ಲಿದೆ ನೋಡಿ.

ಕಲಬುರಗಿ, (ಮೇ 19): ಅಂತೂ ಇಂತೂ ಆರ್​​​ಸಿಬಿ ಲೀಗ್​​​​ ಕೊನೆ ಪಂದ್ಯದಲ್ಲಿ ಭರ್ಜರಿ ಜಯದೊಂದಿಗೆ ಪ್ಲೇ ಆಫ್​ಗೆ ಎಂಟ್ರಿಕೊಟ್ಟಿದೆ. ಐಪಿಎಲ್​​ನ ಬದ್ಧವೈರಿ ಚೆನ್ನೈ ಸೂಪರ್​ ಕಿಂಗ್ಸ್​​ ವಿರುದ್ಧ ಗೆಲ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಮಧ್ಯರಾತ್ರಿಯಾಗಿದ್ರೂ ಅವ್ರ ಸಂತಸಕ್ಕೆ ಕುಂದುಟಾಗಿಲ್ಲ. ಆರ್​​ಸಿಬಿ ಜಯಘೋಷ.. ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮ.. ಮಧ್ಯರಾತ್ರಿಯೆಲ್ಲ ಸಡಗರವೋ ಸಡಗರ.. ಮುಗಿಲು ಮುಟ್ಟಿದ ಅಭಿಮಾನಿಗಳ ಹರ್ಷೋದ್ಘಾರ.. ನಿನ್ನೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಹಬ್ಬದ ವಾತಾವರಣ ಮನೆ ಮಾಡಿತ್ತು. ಇನ್ನು ಆರ್​ಸಿಬಿ ಗೆಲುವಿಗಾಗಿ ಅಭಿಮಾನಿಗಳು ಹೊತ್ತುಕೊಂಡಿದ್ದ ಹರಿಕೆಗಳನ್ನು ತೀರುಸುತ್ತಿದ್ದಾರೆ. ಇನ್ನು ಚೆನೈ ವಿರುದ್ದ ಗೆದ್ದು ಆರ್ ಸಿಬಿ ಗೆದ್ದು ಪ್ಲೇಆಫ್ ಪ್ರವೇಶಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಯುವಕನೋರ್ವ ಡಂಗೂರ ಸಾರಿದ್ದಾನೆ. ದೌಲಪ್ಪ ಅಲಿಯಾಸ್ ಮಲ್ಲು ಎನ್ನುವರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಂಗೂರ ಹಾಕುತ್ತ,ಚೆನ್ನೈ ಮನೆಗೆ ಹೋಗಿದೆ. ಈ ಬಾರಿ ಕಪ್​ ನಮ್ದೆ ಎಂದು ಹೇಳಿಕೊಂಡು ಸುತ್ತಾಡಿದ್ದಾನೆ.

Published on: May 19, 2024 01:06 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More