AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಮತ್ತು ನನ್ನ ಸಂಬಂಧ ಹಾಳುಮಾಡುವ ಪ್ರಯತ್ನ ನಡೆದಿದೆ: ಬಿಅರ್ ಪಾಟೀಲ್ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಮತ್ತು ನನ್ನ ಸಂಬಂಧ ಹಾಳುಮಾಡುವ ಪ್ರಯತ್ನ ನಡೆದಿದೆ: ಬಿಅರ್ ಪಾಟೀಲ್

ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಮತ್ತು ನನ್ನ ಸಂಬಂಧ ಹಾಳುಮಾಡುವ ಪ್ರಯತ್ನ ನಡೆದಿದೆ: ಬಿಅರ್ ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 02, 2025 | 11:01 AM

Share

ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್, ಅವರ ನೇತೃತ್ವದಲ್ಲಿ 7-8 ಜನ ಜೆಡಿಎಸ್ ನಾಯಕರು ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದಾಗ ಅವರಿಗಿರುವ ಜನಮನ್ನಣೆ ಕಂಡು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿತು. ಅವರನ್ನು ಮುಖ್ಯಮಂತ್ರಿ ಮಾಡುವಷ್ಟು ಸಾಮರ್ಥ್ಯ ತನಗಿಲ್ಲ ,ಯಾರೋ ಉದ್ದೇಶಪೂರ್ವಕವಾಗಿ ತನ್ನ ಹೇಳಿಕೆಗಳನ್ನು ತಿರುಚುತ್ತಿದ್ದಾರೆ ಎಂದು ಬಿಆರ್ ಪಾಟೀಲ್ ಬೆಂಗಳೂರಲ್ಲಿ ಹೇಳಿದರು.

ಬೆಂಗಳೂರು, ಜುಲೈ 2: ಕಳೆದ ಮೂರ್ನಾಲ್ಕು ವಾರಗಳಿಂದ ಸುದ್ದಿಯಲ್ಲಿರುವ ಆಳಂದ್ ಶಾಸಕ ಬಿಅರ್ ಪಾಟೀಲ್ ನಿನ್ನೆ ತಾನು ಕೆಆರ್ ಪೇಟೆಯಲ್ಲಿ ಹೇಳಿದ್ದನ್ನು ತಿರುಚಿ ವರದಿ ಮಾಡಲಾಗಿದೆ ಎಂದು ಹೇಳಿದರು. ತನ್ನನ್ನು ತೇಜೋವಧೆ ಮಾಡುವ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜೊತೆಗಿರುವ ಸಂಬಂಧವನ್ನು ಹಾಳು ಮಾಡುವ ಪ್ರಯತ್ನ ನಡೆದಿದೆ ಎಂದು ಹೇಳಿದ ಪಾಟೀಲ್, ತಾನು ಸಿಎಂ ಅವರ ಬಗ್ಗೆ ಮಾತಾಡಿದ್ದು ನಿಜ, ಲಕ್ಕಿ ಲಾಟರಿಯಲ್ಲಿ ಅವರು ಮುಖ್ಯಮಂತ್ರಿ ಆದರೆಂದು ಹೇಳಿದ್ದು ಸಹ ಸತ್ಯ, ಅದರೆ ಅವರು ತನ್ನನ್ನು ಕರೆದೊಯ್ದು ಸೋನಿಯಾ ಗಾಂಧಿವರನ್ನು ಭೇಟಿ ಮಾಡಿಸಿದ್ದು ಅಂತ ವರದಿಯಾಗಿರುವುದು ಶುದ್ಧ ಸುಳ್ಳು, ಶ್ರೀಮತಿ ಗಾಂಧಿಯವರನ್ನು ಭೇಟಿ ಮಾಡಿಸುವಂತೆ ಹಠ ಮಾಡಿದ್ದು ತಾನೇ ಎಂದರು.

ಇದನ್ನೂ ಓದಿ:   ಸಚಿವ ಜಮೀರ್ ಆಡಿದ ಮಾತುಗಳಿಗೆ ಪ್ರತಿಕ್ರಿಯೆ ನೀಡಲೊಲ್ಲದ ಶಾಸಕ ಬಿಅರ್ ಪಾಟೀಲ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.