ಕರಾವಳಿಯಲ್ಲಿ ಇಂದು ಈದ್ ಮಿಲಾದ್ ಆಚರಣೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ

Updated on: Aug 25, 2026 | 8:00 AM

ಕರಾವಳಿಯಲ್ಲಿ ಈದ್ ಮಿಲಾದ್ ಆಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು (ಆಗಸ್ಟ್ 25) ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ರಾಜ್ಯಾದ್ಯಂತ ಆಗಸ್ಟ್ 26ರಂದು ಈದ್ ಮಿಲಾದ್ ಪ್ರಯುಕ್ತ ರಜೆ ಇರಲಿದೆ. ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಇಂದು ರಜೆ ನೀಡಲಾಗಿದೆ.

ಬೆಂಗಳೂರು, ಆಗಸ್ಟ್ 25: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು (ಆಗಸ್ಟ್ 25) ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈದ್ ಮಿಲಾದ್ ಆಚರಣೆ ಇಂದೇ ನಡೆಯುವ ಹಿನ್ನೆಲೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಆಗಸ್ಟ್ 26ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಇರಲಿದೆ. ಸ್ಥಳೀಯ ಬೇಡಿಕೆಯ ಮೇರೆಗೆ ಇಂದೇ ಕರಾವಳಿ ಜಿಲ್ಲೆಗಳಿಗೆ ರಜೆ ನೀಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆಗಸ್ಟ್ 25 ರಂದೇ ಈದ್ ಮಿಲಾದ್ ಆಚರಿಸುವ ಕಾರಣ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿತ್ತು. ಈ ಮನವಿಯನ್ನು ಪರಿಗಣಿಸಿ ಸರ್ಕಾರ ಇಂದೇ ಸಾರ್ವತ್ರಿಕ ರಜೆಯನ್ನು ಘೋಷಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us