AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಷ್​​, ಹಿಂದಿಯಲ್ಲಿ ಮನವಿ ಮಾಡಿದ ರೈತ: ಬಹುಭಾಷೆಯಲ್ಲಿ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!

ಇಂಗ್ಲಿಷ್​​, ಹಿಂದಿಯಲ್ಲಿ ಮನವಿ ಮಾಡಿದ ರೈತ: ಬಹುಭಾಷೆಯಲ್ಲಿ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!

ಪ್ರಸನ್ನ ಹೆಗಡೆ
|

Updated on:May 13, 2026 | 4:32 PM

Share

ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ವಯಸ್ಕ ರೈತರೊಬ್ಬರು ಶಾಸಕ ಸುರೇಶ್ ಬಾಬು ಬಳಿ ಇಂಗ್ಲಿಷ್, ಹಿಂದಿಯಲ್ಲಿ ಸಮಸ್ಯೆ ಹೇಳಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಅವರ ಮಾತುಗಳಲ್ಲಿ ನೋವೂ ಇದೆ, ಹೋರಾಟದ ಶಕ್ತಿಯೂ ಇದೆ! ಎಂದು ನೆಟ್ಟಿಗರು ಪ್ರಶಂಸಿದ್ದಾರೆ. ಅಹವಾಲು ನೀಡಲು ಬಂದ ರೈತ ಬೇರೆ ಬೇರೆ ಭಾಷೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಶಾಸಕರೂ ಆಶ್ಚರ್ಯಪಟ್ಟಿದ್ದಾರೆ.

ತುಮಕೂರು, ಮೇ 13: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ವಯಸ್ಕ ರೈತರೋರ್ವರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಬಳಿ ಇಂಗ್ಲಿಷ್​​ ಮತ್ತು ಹಿಂದಿಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಹವಾಲು ನೀಡಲು ಬಂದ ರೈತ ಬೇರೆ ಬೇರೆ ಭಾಷೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಶಾಸಕ ಸಿ.ಬಿ. ಸುರೇಶ್​​ ಬಾಬು ಅಚ್ಚರಿಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ ಎದುರು ಅಚಲವಾಗಿ ನಿಂತಿರುವ ಈ ವಯೋವೃದ್ಧ ರೈತನ ಮನಕಲುಕುವ ಮನವಿಯನ್ನು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಕೇಳಿ. ಅವರ ಮಾತುಗಳಲ್ಲಿ ನೋವೂ ಇದೆ, ಹೋರಾಟದ ಶಕ್ತಿಯೂ ಇದೆ ಎಂದು ನೆಟ್ಟಿಗರು ಪ್ರಶಂಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 13, 2026 04:31 PM

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More